ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಿ: ಪ್ರಧಾನಿ ಮೋದಿ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಗುಜರಾತ್ ನ ಕಚ್ಗೆ ಯತ್ತ ಬಿಪರ್ಜೋಯ್ ಚಂಡಮಾರುತ ಸಾಗುತ್ತಿದ್ದು, ಈ ಹಿನ್ನೆಲೆ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನೈಋತ್ಯ ಮುಂಗಾರಿನ ಜೊತೆಗೆ ದೇಶದ ವಿವಿಧ ರಾಜ್ಯಗಳಲ್ಲಿ ‘ಬಿಪರ್ಜೋಯ್’ ಚಂಡಮಾರುತ ಅಬ್ಬರ ಜೋರಾಗಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಅವರು ಇಂದು ಅಧಿಕಾರಿಗಳ ಜೊತೆ ಉನ್ನತ ಮಟ್ಟದ ಸಭೆ ನಡೆಸಿದರು.

ಬಳಿಕ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರನ್ನು ರಾಜ್ಯ ಸರ್ಕಾರ ಸುರಕ್ಷಿತವಾಗಿ ಸ್ಥಳಾಂತರಿಸುವುದನ್ನು ಖಚಿತಪಡಿಸಿಕೊಳ್ಳಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು ಎಂದು ಪ್ರಧಾನಮಂತ್ರಿ ಕಚೇರಿಯ ಪ್ರಕಟಣೆ ತಿಳಿಸಿದೆ.

ವಿದ್ಯುತ್, ದೂರವಾಣಿ, ಆರೋಗ್ಯ ಮತ್ತು ಕುಡಿಯುವ ನೀರಿನಂತಹ ಎಲ್ಲಾ ಅಗತ್ಯ ಸೇವೆಗಳ ನಿರ್ವಹಣೆ ಮತ್ತು ಅವುಗಳಿಗೆ ಯಾವುದೇ ಹಾನಿ ಉಂಟಾದರೆ ತಕ್ಷಣವೇ ಅವುಗಳನ್ನು ಪುನಃಸ್ಥಾಪಿಸುವಂತೆ ಮೋದಿ ನಿರ್ದೇಶನ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!