ಹೊಸದಿಗಂತ ಡಿಜಿಟಲ್ ಡೆಸ್ಕ್ :
ಮೋದಿ 10 ಬಾರಿ ರಾಜ್ಯಕ್ಕೆ ಬಂದರೂ ಏನೂ ಆಗಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಮಹಿಳಾ ಸಮಾವೇಶದಲ್ಲಿ ಮಾತನಾಡಿ, ಪ್ರವಾಹ ಬಂದಾಗ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಬಂದಿಲ್ಲ, ಕೊರೊನಾ ಬಂದಾಗ ಬಂದಿದ್ದರೇ?ಇವಾಗ ಯಾಕೆ ಇಷ್ಟು ಬಾರಿ ರಾಜ್ಯಕ್ಕೆ ಬರುತ್ತಿದ್ದಾರೆ, ಕೇವಲ ವೋಟಿಗಾಗಿ ಅವರು ಬರುತ್ತಿದ್ದಾರೆ. ಜನ ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.
ಬೊಮ್ಮಾಯಿ ಸರ್ಕಾರ ಲೂಟಿಕೋರರ ಸರ್ಕಾರ, ಉದ್ಯೋಗ ಸೃಷ್ಟಿಸುತ್ತೇವೆ ಎಂದು ಮೋದಿ ಸುಳ್ಳು ಹೇಳಿದರು. ಆದರೆ, ನಾವು ಅಧಿಕಾರಕ್ಕೆ ಬಂದರೆ ಗೌರಿಬಿದನೂರಿನ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನ ಮಾಡುತ್ತೇವೆ. ಗ್ಯಾರಂಟಿ ಕಾರ್ಡ್ಗೆ ನಾನು, ಡಿ.ಕೆ. ಶಿವಕುಮಾರ್ ಸಹಿ ಹಾಕಿದ್ದೇವೆ. ನಾವು ಕೊಟ್ಟ ಭರವಸೆ ಈಡೇರಿಸದೆ ಹೋದರೆ ಒಂದು ಕ್ಷಣ ಅಧಿಕಾರದಲ್ಲಿ ಇರಲ್ಲ ತಿಳಿಸಿದರು.