Sunday, September 7, 2025

ದೇಶಕ್ಕೇ ಪ್ರಧಾನಿಯಾದರೂ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತ: ಬಿಜೆಪಿ ಕಾರ್ಯಾಗಾರದಲ್ಲಿ ಕೊನೆ ಸಾಲಿನಲ್ಲಿ ಕುಳಿತ ಮೋದಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಉಪರಾಷ್ಟ್ರಪತಿ ಚುನಾವಣೆಗೆ ಸಜ್ಜಾಗಲು ಎನ್​ಡಿಎ ಸಂಸದರಿಗೆ ಕಾರ್ಯಾಗಾರ ನಡೆಸಲಾಗಿದ್ದು, ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಕೂಡ ಸಾಮಾನ್ಯ ಸಂಸದರಂತೆ ಭಾಗವಹಿಸಿದ್ದಾರೆ.

ಸಂಸತ್ ಸಂಕೀರ್ಣದ ಜಿಎಂಸಿ ಬಾಲಯೋಗಿ ಸಭಾಂಗಣದಲ್ಲಿ ನಡೆದ ಕಾರ್ಯಾಗಾರದಲ್ಲಿ ಸಾಮಾನ್ಯ ಬಿಜೆಪಿ ಸಂಸದರಂತೆ ಪ್ರಧಾನಿ ಮೋದಿ ಕೊನೆಯ ಸಾಲಿನಲ್ಲಿ ಕುಳಿತಿದ್ದರು.

ಈ ದೃಶ್ಯದ ಫೋಟೋವೊಂದನ್ನು ಬಿಜೆಪಿ ಸಂಸದ ರವಿ ಕಿಶನ್ ಅವರು ಎಕ್ಸ್ ಪೋಸ್ಟ್​ನಲ್ಲಿ ಹಂಚಿಕೊಂಡಿದ್ದಾರೆ. ಬಿಜೆಪಿಯ ಶಕ್ತಿಗೆ ಇದು ದ್ಯೋತಕವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

‘ಎನ್​ಡಿಎ ಸಂಸದರ ಕಾರ್ಯಾಗಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಕೊನೆಯ ಸಾಲಿನಲ್ಲಿ ಕುಳಿತಿದ್ದರು. ಅವರು ಬಿಜೆಪಿಯ ಶಕ್ತಿಯ ದ್ಯೋತಕವಾಗಿದ್ದಾರೆ. ಈ ಸಂಘಟನೆಯಲ್ಲಿ ಪ್ರತಿಯೊಬ್ಬ ಕಾರ್ಯಕರ್ತನೂ ಒಂದು ಭಾಗವಾಗಿದ್ದಾರೆ’ ಎಂದು ರವಿ ಕಿಶನ್ ತಿಳಿಸಿದ್ದಾರೆ.

https://x.com/sambitswaraj/status/1964604881656041497?ref_src=twsrc%5Etfw%7Ctwcamp%5Etweetembed%7Ctwterm%5E1964604881656041497%7Ctwgr%5Ea74e5df5c685a767e5ff3e9c06e4f749ecca38e3%7Ctwcon%5Es1_&ref_url=https%3A%2F%2Ftv9kannada.com%2Fnational%2Fvp-election-preparation-narendra-modi-sits-in-last-bench-during-nda-mps-workshop-1077477.html

ಸೆಪ್ಟೆಂಬರ್ 9ರಂದು ಉಪರಾಷ್ಟ್ರಪತಿಗಳ ಆಯ್ಕೆಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಎನ್​ಡಿಎ ಸಂಸದರಿಗೆ ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.

ಎನ್​ಡಿಎ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರು ಸ್ಪರ್ಧಿಸಿದ್ದಾರೆ. ವಿಪಕ್ಷಗಳು ಸೇರಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ಅವರನ್ನು ಕಣಕ್ಕಿಳಿಸಿವೆ.

https://x.com/ravikishann/status/1964597974044201265

ಪಕ್ಷಗಳ ಬಲಾಬಲ ಪರಿಗಣಿಸಿದರೆ ಎನ್​ಡಿಎ ಅಭ್ಯರ್ಥಿ ರಾಧಾಕೃಷ್ಣವ್ ಅವರಿಗೆ 439 ಸಂಸದರ ಬೆಂಬಲ ಇದೆ. ವಿಪಕ್ಷಗಳ ಅಭ್ಯರ್ಥಿಗೆ ಕೇವಲ 324 ಸದಸ್ಯರ ಬೆಂಬಲ ಇದೆ. ಬಿಜೆಡಿ, ಬಿಆರ್​ಎಸ್ ಪಕ್ಷಗಳ ಸಂಸದರ ಬೆಂಬಲ ಯಾರಿಗೆ ಇದೆ ಎನ್ನುವ ಸುಳಿವು ಇನ್ನೂ ಸಿಕ್ಕಿಲ್ಲ. ಆದಾಗ್ಯೂ ರಾಧಾಕೃಷ್ಣನ್ ಅವರು ಮುಂದಿನ ಉಪರಾಷ್ಟ್ರಪತಿಯಾಗುವ ಎಲ್ಲಾ ಸಾಧ್ಯತೆ ದಟ್ಟವಾಗಿದೆ.

ಇದನ್ನೂ ಓದಿ