ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕರ್ನಾಟಕದಲ್ಲಿ ಕೈಗಾರಿಕೆಗಳ ಪುನರುಜ್ಜೀವನಕ್ಕೆ ರಾಜ್ಯ ಸರ್ಕಾರ ತಡೆಯಾಗಿದೆ ಎಂದು ಆರೋಪಿಸಿದ್ದಾರೆ.
ದಾವಣಗೆರೆ ದಕ್ಷಿಣ ಕ್ಷೇತ್ರದ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರ ಕೈಗಾರಿಕೆಗಳಿಗೆ ಹೂಡಿಕೆ ಮಾಡಲು ಸಜ್ಜಾಗಿದ್ದರೂ ಸಿದ್ದರಾಮಯ್ಯ ಸರ್ಕಾರ ಸಹಕಾರ ನೀಡುತ್ತಿಲ್ಲ ಎಂದು ಹೇಳಿದ್ದಾರೆ.
ಕೇಂದ್ರವು ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (KIOCL)ಗೆ 1,700 ಕೋಟಿ ರೂ. ಹೂಡಿಕೆ ಮಾಡಿದರೂ, ರಾಜ್ಯ ಸರ್ಕಾರ ಯಾವುದೇ ಕಾರಣವಿಲ್ಲದೆ ಕಂಪನಿಯ ಕೆಲಸವನ್ನು ತಡೆಯಲು ಮುಂದಾಗಿದೆ ಎಂದು ಅವರು ಆರೋಪಿಸಿದರು. ಅವರು ಅರಣ್ಯ ಕಾಯ್ದೆ ಹತ್ತಿರದ HT ಪುನರುಜ್ಜೀವನಕ್ಕೂ ಅಡ್ಡಿಯಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:
ಹೆಚ್.ಡಿ. ಕುಮಾರಸ್ವಾಮಿ ಪಕ್ಕದ ಆಂಧ್ರ ಪ್ರದೇಶದ ಉಕ್ಕಿನ ಕಾರ್ಖಾನೆ ಪುನರಾರಂಭ ಮತ್ತು ಹೊಸ ಹೂಡಿಕೆ ಯೋಜನೆಗಳನ್ನು ಉದಾಹರಿಸುತ್ತಾ, ಕರ್ನಾಟಕದ ಕಾಂಗ್ರೆಸ್ ಸರ್ಕಾರ ಕೇಂದ್ರದ ಸಹಕಾರವನ್ನು ಅಡ್ಡಿಪಡಿಸುತ್ತಿದೆ ಎಂದು ಟೀಕಿಸಿದರು.
ಕೇಂದ್ರದಿಂದ ನೀಡಿರುವ ಪಡಿತರ, ಗ್ಯಾಸ್ ಸಿಲಿಂಡರ್ ಪೂರೈಕೆ ಹಾಗೂ 15 ಲಕ್ಷ ಮನೆ ಯೋಜನೆಗಳಲ್ಲಿ ಸರ್ಕಾರದ ನಿಧಾನ ಕ್ರಮಗಳನ್ನೂ ಅವರು ಇತ್ತೀಚಿಗೆ ವಿವರಿಸಿದರು. ರಾಜ್ಯದಲ್ಲಿನ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ತಮ್ಮ ಹಕ್ಕು ಪಡೆಯಲು ಸಿಎಂ ಮನಸ್ಸು ಮಾಡುತ್ತಿಲ್ಲ ಎಂದರು.



