BJP | ಎಲ್ಲವೂ ಅಫೀಶಿಯಲ್‌, ಬಿಜೆಪಿಗೆ ಸೇರ್ಪಡೆಯಾದ ಜನಾರ್ದನ ರೆಡ್ಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸ್ಥಾಪಕ, ಶಾಸಕ ಜನಾರ್ದನ ರೆಡ್ಡಿ ಇಂದು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.

ಬಿ.ಎಸ್​​.ಯಡಿಯೂರಪ್ಪ, ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ರೆಡ್ಡಿ ಅವರಿಗೆ ಪಕ್ಷದ ಬಾವುಟ ನೀಡಿ ಬಿವೈ ವಿಜಯೇಂದ್ರ ಸ್ವಾಗತಿಸಿದರು.

ಬಿಜೆಪಿಯಲ್ಲಿ  ಕೆಆರ್‌ಪಿಪಿ ಪಕ್ಷವನ್ನೂ ವಿಲೀನಗೊಳಿಸಿದ್ದಾರೆ. ನಿನ್ನೆ ರಾಜ್ಯ ಬಿಜೆಪಿ ನಾಯಕರೊಂದಿಗೆ ನಡೆದ ಸಭೆಯಲ್ಲಿ ಬಿಜೆಪಿಗೆ ಸೇರಲು ಜನಾರ್ದನ ರೆಡ್ಡಿ ಒಪ್ಪಿಕೊಂಡಿದ್ದರು. ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯನಗರ ಜಿಲ್ಲೆಯ ಎಲ್ಲ ಬೆಂಬಲಿಗರ ಜೊತೆ ಜನಾರ್ದನ ರೆಡ್ಡಿ ಇಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಇತ್ತೀಚೆಗಷ್ಟೇ ಜನಾರ್ದನ ರೆಡ್ಡಿ ಭೇಟಿ ಮಾಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!