ಒಗ್ಗಟ್ಟಾಗಿ ಕೆಲಸ ಮಾಡಬೇಕೆಂಬುದು ಹೈಕಮಾಂಡ್‌ ನಿಲುವು, ಅದಕ್ಕೆ ಬದ್ದ-ಡಿಕೆಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅಂತೂ ಸಿಎಂ ಕುರ್ಚಿ ಕಿತ್ತಾಟ ಮುಗಿದಿದೆ. ಸಿದ್ದು ಸಿಎಂ ಆಗಿ, ಡಿಕೆಶಿ ಡಿಸಿಎಂ ಆಗಿ ಆಯ್ಕೆಯಾಗಿದ್ದಾರೆ. ಇದರ ಬೆನ್ನಲ್ಲೇ ಮಾತನಾಡಿದ ಡಿ.ಕೆ.ಶಿವಕುಮಾರ್‌, ಎಲ್ಲವೂ ಚೆನ್ನಾಗಿದೆ ಮತ್ತು ಮುಂದೆಯೂ ಚೆನ್ನಾಗಿರುತ್ತದೆ. ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಹೈಕಮಾಂಡ್‌ ಹೇಳಿದೆ ಎಂದರು.

ಒಗ್ಗಟ್ಟಾಗಿ ಕೆಲಸ ಮಾಡಬೇಕೆಂದು ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದು, ಅದನ್ನು ಸಂಪೂರ್ಣವಾಗಿ ಒಪ್ಪಿಕೊಂಡಿದ್ದೇವೆ. ಅಂತೆಯೇ ಅವರ ಮಾರ್ಗದರ್ಶನಲ್ಲೇ ನಡೆಯುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!