ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಸರ್ಕಾರ ಪಾಕ್ನ ಸೆಲೆಬ್ರಿಟಿಗಳ ಸಾಮಾಜಿಕ ಮಾಧ್ಯಮ ಖಾತೆಗಳನ್ನು ತಡೆಹಿಡಿದಿರುವ ಕ್ರಮವನ್ನು ಬಾಲಿವುಡ್ ನಟ ಸುನೀಲ್ ಶೆಟ್ಟಿ ಬೆಂಬಲಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದ ಶಾಂತಿಯನ್ನು ಕದಡಲು ಮತ್ತು ಮುಗ್ಧ ಜನರನ್ನು ಕೊಲ್ಲಲು ಪ್ರಯತ್ನಿಸುವವರೊಂದಿಗೆ ಎಲ್ಲವನ್ನೂ ನಿಷೇಧಿಸಬೇಕು. ಅದು ಕಲೆಯಾದರೂ ಸರಿ ಅಥವಾ ಕ್ರಿಕೆಟ್ ಆದರೂ ಸರಿ ಎಂದು ಹೇಳಿದ್ದಾರೆ.
ನಾವು ಧರ್ಮ, ಕರ್ಮ ಮತ್ತು ಸೇವೆ ಎಂದು ಹೇಳುವ ದೇಶದಲ್ಲಿದ್ದೇವೆ. ಜವಾಬ್ದಾರಿಯುತ ನಾಗರಿಕರಾಗಿ ನಾವು ಮಾಡಬೇಕಾಗಿರುವುದು ಇಷ್ಟೇ. ಯಾರಿಗೂ ದ್ವೇಷವನ್ನು ಹರಡಲು ಅವಕಾಶ ನೀಡದೆ, ಒಗ್ಗಟ್ಟಿನಿಂದ ಬದುಕೋಣ.
ಪ್ರಧಾನಿ ಮೋದಿ ಅವರು ಸೇನೆಗೆ ನಿರ್ಧಾರ ತೆಗೆದುಕೊಳ್ಳುವ ಜವಾಬ್ದಾರಿಯನ್ನು ನೀಡಿದ್ದಾರೆ. ಸಮವಸ್ತ್ರದಲ್ಲಿರುವ ಸೈನಿಕರು ತಾವು ಮಾಡಬೇಕಾದ್ದನ್ನು ಮಾಡುತ್ತಾರೆಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.