ಐಸಿಐಸಿಐ ಬ್ಯಾಂಕ್‍ನ ಮಾಜಿ ಸಿಇಒ ಚಂದಾ ಕೊಚ್ಚರ್ ದಂಪತಿಗೆ ಜಾಮೀನು ಮಂಜೂರು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಸಿಐಸಿಐ ಬ್ಯಾಂಕ್‍ನ ಮಾಜಿ ಸಿಇಒ ಚಂದಾ ಕೊಚ್ಚರ್ ಹಾಗೂ ಅವರ ಪತಿ ದೀಪಕ್ ಕೊಚ್ಚರ್ ಅವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿ ರೇವತಿ ಮೋಹಿತೆ ಡೆರೆ ಮತ್ತು ಪಿ.ಕೆ. ಚವಾಣ್ ಅವರ ವಿಭಾಗೀಯ ಪೀಠವು ಬಾಂಬೆ ಹೈಕೋರ್ಟ್ , ಕಳೆದ ತಿಂಗಳು ಬಂಧಿಸಿರುವುದು ಕಾನೂನುಬಾಹಿರವಾಗಿದೆ ಎಂದು ಅಭಿಪ್ರಾಯಪಟ್ಟ ಜಾಮೀನು ಮಂಜೂರು ಮಾಡಿದೆ.

ಚಂದಾ ಕೊಚ್ಚರ್ ಖಾಸಗಿ ವಲಯದ ಬ್ಯಾಂಕ್‍ನ ಮುಖ್ಯಸ್ಥರಾಗಿದ್ದಾಗ ವೀಡಿಯೋಕಾನ್ ಗ್ರೂಪ್‍ಗೆ ನೀಡಲಾಗಿದ್ದ 3,000 ಕೋಟಿ ರೂ. ಸಾಲದಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಪ್ರಕರಣದಲ್ಲಿ ಡಿ. 24ರಂದು ಸಿಬಿಐ ಬಂಧಿಸಿತ್ತು. ಈ ಸಂಬಂಧ ಜಾಮೀನು ಮಂಜೂರು ಮಾಡಬೇಕೆಂದು ಕೋರಿ ಕೊಚ್ಚರ್ ದಂಪತಿ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!