ಮಾಜಿ ಕಾರ್ಪೋರೇಟರ್ ಗೆ ಚಾಕು ಇರಿತ: ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಬೆಂಗಳೂರು ನಗರದ ಚಾಮರಾಜಪೇಟೆಯ ಟಿಪ್ಪುನಗರ ವಾರ್ಡ್ ನ ಮಾಜಿ ಕಾರ್ಪೋರೇಟರ್ ಅಯೂಬ್ ಖಾನ್ಗೆ ಚಾಕು ಇರಿಯಲಾಗಿದೆ.
ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾಲಿಕೆ ಸದಸ್ಯರ ಸಂಬಂಧಿಯಿಂದಲೇ ಈ ದುಷ್ಕೃತ್ಯ ನಡೆದಿದೆ.
ಮೇಲ್ನೋಟಕ್ಕೆ ಆಸ್ತಿ ವಿವಾದ ಸಂಬಂಧ ಗಲಾಟೆಗೆ ನಡೆದಿರುವ ಸಾಧ್ಯತೆ ಇದ್ದು, ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂದು 7.30ರ ಸುಮಾರಿಗೆ ಚಾಮರಾಜಪೇಟೆಯ ವಿನಾಯಕ ಚಿತ್ರಮಂದಿರ ಬಳಿ ಈ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!