ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಳ್ಳಾರಿಯಲ್ಲಿ ಮಾಜಿ ಮೇಯರ್ ಪುತ್ರ ಹುಟ್ಟುಹಬ್ಬದ ದಿನ ಗೂಂಡಾಗಿರಿ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಜನ್ಮದಿನದಂದು, ಅಪರಿಚಿತ ವ್ಯಕ್ತಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.
ರಘು ಎಂಬಾತನ ಗ್ಯಾಂಗ್ ಸೇರಿಕೊಂಡು, ರಸ್ತೆಯಲ್ಲಿ ಡಿಜೆ ಹಾಕಿಕೊಂಡು ತಲವಾರು ಹಿಡಿದು ರಸ್ತೆಯಲ್ಲಿ ನಿಂತು ಡ್ಯಾನ್ಸ್ ಮಾಡಿದ್ದಾರೆ. ಈ ವೇಳೆ ದಾರಿ ಬಿಡಿ ಎಂದು ಕೇಳಿದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ರಘು ಮತ್ತು ಆತನ ಸ್ನೇಹಿತರು ತಿಪ್ಪೇಸ್ವಾಮಿ ಎಂಬ ಯುವಕನ ಮೇಲೆ ಹಲ್ಲೆ ನಡೆಸಿ ಸುತ್ತಿಗೆಯಿಂದ ಹೊಡೆದಿದ್ದಾರೆ. ಇದರಿಂದ ತಿಪ್ಪೇಸ್ವಾಮಿ ಅವರ ತಲೆ ಹಾಗೂ ದೇಹದ ಇತರ ಭಾಗಗಳಿಗೆ ಗಂಭೀರ ಗಾಯಗಳಾಗಿವೆ.
ಘಟನೆಗೆ ಸಂಬಂಧಿಸಿದಂತೆ ಬಳ್ಳಾರಿ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ರಘು ಸೇರಿದಂತೆ ಎಂಟು ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪ್ರಮುಖ ಆರೋಪಿ ರಘು ಸೇರಿದಂತೆ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.