ಅಬಕಾರಿ ನೀತಿ ಪ್ರಕರಣ: ದೆಹಲಿ ಮಾಜಿ ಡಿಸಿಎಂ ಸಿಸೋಡಿಯಾ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಕೋರ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಶುಕ್ರವಾರ ಮುಕ್ತಾಯಗೊಳಿಸಿದ ದೆಹಲಿ ನ್ಯಾಯಾಲಯ, ಮಾರ್ಚ್ 31ಕ್ಕೆ ತೀರ್ಪು ಕಾಯ್ದಿರಿಸಿದೆ.

ಪ್ರಕರಣದಲ್ಲಿಸಿಬಿಐ ಕಿರು ಟಿಪ್ಪಣಿಯನ್ನು ಹಸ್ತಾಂತರಿಸಿದ ನಂತರ ಪ್ರಕರಣದಲ್ಲಿ ಸಿಸೋಡಿಯಾ ಅವರಿಗೆ ನಿಯಮಿತ ಜಾಮೀನು ನೀಡುವ ಕುರಿತು ವಿಶೇಷ ನ್ಯಾಯಾಧೀಶ ಎಂ ಕೆ ನಾಗ್ಪಾಲ್ ತಮ್ಮ ಆದೇಶವನ್ನು ಕಾಯ್ದಿರಿಸಿದ್ದಾರೆ.

ಇದರ ಜೊತೆ ಸೋಡಿಯಾ ಅವರ ಜಾಮೀನು ಅರ್ಜಿಯನ್ನು ವಿರೋಧಿಸಿದ ಸಿಬಿಐ, ಅವರು ‘ಹಿಂದೆಂದೂ ಕಂಡಿಲ್ಲದ’ 18 ಸಚಿವಾಲಯಗಳೊಂದಿಗೆ ವ್ಯವಹರಿಸಿದ್ದಾರೆ ಮತ್ತು ಅವರು ವಿದೇಶಕ್ಕೆ ತೆರಳುವುದಿಲ್ಲವಾದರೂ, ಅವರು ಖಂಡಿತವಾಗಿಯೂ ಸಾಕ್ಷ್ಯ ನಾಶದ ಅಪಾಯವನ್ನು ಹೊಂದಿದ್ದಾರೆ ಎಂದು ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!