ಹೊಸದಿಗಂತ ಡಿಜಿಟಲ್ ಡೆಸ್ಕ್ :
ದೆಹಲಿ ಸರ್ಕಾರದ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಅಬಕಾರಿ ನೀತಿ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಸಿಬಿಐ ವಿಚಾರಣೆಗೆ ಹಾಜರಾಗಿದ್ದರು.
ಸಿಬಿಐ ಕಚೇರಿಗೆ ವಿಚಾರಣೆಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಅವರು ಮಾತನಾಡಿದ ಅವರು ಸಿಬಿಐ ತನಿಖೆಗೆ ಪೂರ್ಣ ಸಹಕಾರ ನೀಡುತ್ತೇನೆ. ನನ್ನ ಮೇಲಿನ ಆರೋಪ ಸುಳ್ಳು, ಈ ಆರೋಪದಡಿ ಜೈಲಿಗೆ ಹೋದರೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ದೆಹಲಿ ಬಜೆಟ್ ಸಿದ್ಧತೆಯ ಕಾರಣ ನೀಡಿ ಕಳೆದ ಭಾನುವಾರ ಹಾಜರಾಗದ ಸಿಸೋಡಿಯಾ ಇಂದು ಸಿಬಿಐ ವಿಚಾರಣೆಗೆ ಹಾಜರಾಗಿದ್ದಾರೆ.