ಅಬಕಾರಿ ನೀತಿ ಹಗರಣ ಪ್ರಕರಣ: ಕೇಜ್ರಿವಾಲ್​ಗೆ ಏ.15ರವರೆಗೆ ನ್ಯಾಯಾಂಗ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ಗೆ ಏ.15ರವರೆಗೆ ನ್ಯಾಯಾಂಗ ಬಂಧನಕ್ಕೆ ದೆಹಲಿಯ ರೋಸ್‌ ಅವೆನ್ಯೂ ನ್ಯಾಯಾಲಯ ಆದೇಶ ಹೊರಡಿಸಿದೆ.

ಅರ್ಜಿ ವಿಚಾರಣೆ ವೇಳೆ ಇಡಿ ನಮಗೆ ಮುಂದಿನ ವಿಚಾರಣೆ ನಡೆಸುವವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಎಂದು ಮನವಿ ಮಾಡಿತ್ತು.  ನಾವು ಹೆಚ್ಚಿನ ರಿಮಾಂಡ್ ಕೇಳುತ್ತಿಲ್ಲ. ಸೆಂಥಿಲ್ ಬಾಲಾಜಿ ಪ್ರಕರಣದಲ್ಲಿ ಸುಪ್ರೀಂ ತೀರ್ಪಿನ ಪ್ರಕಾರ ಹೆಚ್ಚಿನ ಕಸ್ಟಡಿ ಕೇಳುವ ಹಕ್ಕಿಗೆ ಒಳಪಟ್ಟು ನಾವು ನ್ಯಾಯಾಂಗ ಬಂಧನವನ್ನು ಕೇಳುತ್ತಿದ್ದೇವೆ ಎಂದು ಇಡಿ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು ಮನವಿ ಮಾಡಿದರು.

ಇಡಿ ಮನವಿಯನ್ನು ಪುರಸ್ಕರಿಸಿದ ಕೋರ್ಟ್‌ ಕೇಜ್ರಿವಾಲ್‌ಗೆ ಏಪ್ರಿಲ್‌ 15ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಪ್ರಕಟಿಸಿತು. ಕಳೆದ ಗುರುವಾರ ಕೋರ್ಟ್‌ ಅರವಿಂದ ಕೇಜ್ರಿವಾಲ್‌ ಅವರನ್ನು 4 ದಿನ ಇಡಿ ಕಸ್ಟಡಿಗೆ ನೀಡಿತ್ತು. ಸದ್ಯ ಇಡಿ ಕಸ್ಟಡಿಯಲ್ಲಿ ಇರುವ ಕೇಜ್ರಿವಾಲ್‌ ಇನ್ನು ಮುಂದೆ ತಿಹಾರ್‌ ಜೈಲಿಗೆ ಶಿಫ್ಟ್‌ ಆಗಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!