ಅಬಕಾರಿ ನೀತಿ ಹಗರಣ: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ(Manish Sisodia) ರ ನ್ಯಾಯಾಂಗ ಬಂಧನವನ್ನು ರೋಸ್ ಅವೆನ್ಯೂ ನ್ಯಾಯಾಲಯವು ಮೇ 1 ರವರೆಗೆ ವಿಸ್ತರಿಸಿದೆ.

ಕೇಂದ್ರೀಯ ತನಿಖಾ ದಳ ತನ್ನ ತನಿಖೆಯನ್ನು ಅತ್ಯಂತ ನಿರ್ಣಾಯಕ ಹಂತದಲ್ಲಿದೆ ಎಂದು ಹೇಳಿ ನ್ಯಾಯಾಂಗ ಬಂಧನದ ವಿಸ್ತರಣೆಗೆ ಮನವಿ ಮಾಡಿತ್ತು.

ಮಾರ್ಚ್​ 6 ರಿಂದ ನ್ಯಾಯಾಂಗ ಬಂಧನದಲ್ಲಿರುವ ಸಿಸೋಡಿಯಾ ಅವರ ಬಂಧನದ ಅವಧಿ ಇಂದಿಗೆ ಅಂತ್ಯಗೊಳ್ಳುತ್ತಿತ್ತು. ಸಿಸೋಡಿಯಾ ಅವರು ಈ ಪ್ರಕರಣದ ಕ್ರಿಮಿನಲ್ ಪಿತೂರಿಯ ಪ್ರಮುಖ ಆರೋಪಿ ಎಂದು ಆರೋಪಿಸಿ ಸಿಬಿಐ ಇವರಿಗೆ ಜಾಮೀನು ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!