ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ(Manish Sisodia) ರ ನ್ಯಾಯಾಂಗ ಬಂಧನವನ್ನು ರೋಸ್ ಅವೆನ್ಯೂ ನ್ಯಾಯಾಲಯವು ಮೇ 1 ರವರೆಗೆ ವಿಸ್ತರಿಸಿದೆ.
ಕೇಂದ್ರೀಯ ತನಿಖಾ ದಳ ತನ್ನ ತನಿಖೆಯನ್ನು ಅತ್ಯಂತ ನಿರ್ಣಾಯಕ ಹಂತದಲ್ಲಿದೆ ಎಂದು ಹೇಳಿ ನ್ಯಾಯಾಂಗ ಬಂಧನದ ವಿಸ್ತರಣೆಗೆ ಮನವಿ ಮಾಡಿತ್ತು.
ಮಾರ್ಚ್ 6 ರಿಂದ ನ್ಯಾಯಾಂಗ ಬಂಧನದಲ್ಲಿರುವ ಸಿಸೋಡಿಯಾ ಅವರ ಬಂಧನದ ಅವಧಿ ಇಂದಿಗೆ ಅಂತ್ಯಗೊಳ್ಳುತ್ತಿತ್ತು. ಸಿಸೋಡಿಯಾ ಅವರು ಈ ಪ್ರಕರಣದ ಕ್ರಿಮಿನಲ್ ಪಿತೂರಿಯ ಪ್ರಮುಖ ಆರೋಪಿ ಎಂದು ಆರೋಪಿಸಿ ಸಿಬಿಐ ಇವರಿಗೆ ಜಾಮೀನು ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿದೆ.