ರಂಜಾನ್‌ ಮುನ್ನಾ ದಿನ ಸಂಭವಿಸಿತು ಮಸೀದಿಯಲ್ಲಿ ಸ್ಫೋಟ: ಘಟನೆಯ ಹಿಂದಿದ್ಯಾ ಕಾಣದ ಕೈ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಮಸೀದಿಯಲ್ಲಿ ಜಿಲೆಟಿನ್ ಸ್ಟಿಕ್‌ಗಳಿಂದ ಸ್ಫೋಟವೊಂದು ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲವಾದರೂ, ಮಸೀದಿಯ ಒಳಭಾಗಕ್ಕೆ ಹಾನಿಯಾಗಿದೆ.

ಇನ್ನು ರಂಜಾನ್‌ ಮುನ್ನಾ ದಿನವೇ ಈ ಘಟನೆ ಸಂಭವಿಸಿದ್ದು, ಜನರಲ್ಲಿ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ವ್ಯಕ್ತಿಯೊಬ್ಬ ಮಸೀದಿಯ ಹಿಂಭಾಗದಿಂದ ಪ್ರವೇಶಿಸಿ ಜಿಲೆಟಿನ್ ಸ್ಟಿಕ್‌ಗಳನ್ನು ಇಟ್ಟಿದ್ದು, ಅದು ಸ್ಫೋಟಗೊಂಡಿದೆ ಎಂದು ತನಿಖೆಯಲ್ಲಿ ತಿಳಿದು ಬಂದಿದೆ.

ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು. ಬಂಧಿತ ಆರೋಪಿಗಳನ್ನು ವಿಜಯ್ ರಾಮಾ ಗವ್ಹಾನೆ (22) ಮತ್ತು ಶ್ರೀರಾಮ್ ಅಶೋಕ್ ಸಾಗ್ದೆ (24) ಎಂದು ಗುರುತಿಸಲಾಗಿದೆ.

ಪ್ರಸ್ತುತ, ತನಿಖೆ ಮುಂದುವರಿದಿದ್ದು, ಈ ಘಟನೆಯ ಹಿಂದಿನ ಉದ್ದೇಶ ಮತ್ತು ಸಂಪೂರ್ಣ ವಿವರಗಳು ಶೀಘ್ರದಲ್ಲಿ ಬಹಿರಂಗವಾಗುವ ಸಾಧ್ಯತೆ ಇದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!