ಉದಯಪುರ: ರೈಲು ಹಾದುಹೋಗುವುದಕ್ಕಿಂತ ಮುನ್ನ ಹಳಿಯಲ್ಲಿ ಸ್ಫೋಟ; ಎನ್‌ಐಎ ತನಿಖೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದ ಅಸರ್ವಾ-ಉದಯ್‌ಪುರ  ರೈಲು ಹಾದುಹೋಗುವುದಕ್ಕಿಂತ ಕೆಲ ಗಂಟೆಗಳ ಮುಂಚೆ ಉದಯಪುರ ಜಿಲ್ಲೆಯ ರೈಲ್ವೇ ಹಳಿಯಲ್ಲಿ ಸ್ಫೋಟ ಸಂಭವಿಸಿದೆ. ಈ ವಿಚಾರವಾಗಿ ರಾಜಸ್ಥಾನ ಪೊಲೀಸರು ಮಾಹಿತಿ ನೀಡಿದ್ದು, ಪರಿಶೀಲನೆಯ ಬಳಿಕ ಆ ಪ್ರದೇಶದಿಂದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದಿದ್ದಾರೆ.
“ನಾವು ಎಲ್ಲಾ ಪುರಾವೆಗಳನ್ನು ಸಂಗ್ರಹಿಸುತ್ತಿದ್ದೇವೆ. ಈ ಘಟನೆ ನಡೆದ ಪ್ರದೇಶದ ಮೂಲಕ ರೈಲು ಹಾದು ಹೋಗಬೇಕಿತ್ತು. ಕೆಲವು ಸ್ಫೋಟಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ, ಇದು ಗಣಿಗಾರಿಕೆ ಚಟುವಟಿಕೆಗಳಲ್ಲಿ ಬಳಸಲಾಗುವ ಸ್ಫೋಟಕಗಳಂತೆ ಮೇಲ್ನೋಟಕ್ಕೆ ಕಂಡುಬರುತ್ತದೆ ಎಂದು ಉದಯಪುರ ಎಸ್ಪಿ ವಿಕಾಸ್ ಶರ್ಮಾ ಹೇಳಿದ್ದಾರೆ.
ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಮಾತನಾಡಿ, ಉದಯಪುರದಿಂದ ಸುಮಾರು 35 ಕಿ.ಮೀ ದೂರದಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. “ಸ್ಥಳಕ್ಕೆ ಎನ್‌ ಐ ಹಾಗೂ ಆರ್‌ ಪಿಎಫ್‌ ತಂಡಗಳನ್ನು ಕಳುಹಿಸಿದ್ದೇವೆ. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲಿದೆ,” ಎಂದರು. ಅಹಮದಾಬಾದ್‌ನಿಂದ ಅಸರ್ವಾ-ಉದೈಪುರ್ ಎಕ್ಸ್‌ಪ್ರೆಸ್ ರೈಲು ಸ್ಫೋಟದಲ್ಲಿ ರೈಲ್ವೆ ಹಳಿಗಳು ಹಾನಿಗೊಳಗಾದ ಸ್ಥಳದ ಮೂಲಕ ಹಾದು ಹೋಗಬೇಕಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ರೈಲನ್ನು ಡುಂಗರ್‌ಪುರದಲ್ಲಿ ನಿಲ್ಲಿಸಲಾಗಿದೆ ಎಂದು ರೈಲ್ವೆ ವಕ್ತಾರರು ತಿಳಿಸಿದ್ದಾರೆ.
“ನಾವು ಪುರಾವೆಗಳನ್ನು ಸಂಗ್ರಹಿಸುತ್ತಿದ್ದೇವೆ ಮತ್ತು ಎಲ್ಲಾ ಕೋನಗಳಲ್ಲಿ ತನಿಖೆ ನಡೆಸುತ್ತಿದ್ದೇವೆ. ಪ್ರಕರಣ ದಾಖಲಿಸಿಕೊಳ್ಳಲಾಗುತ್ತಿದೆ ಎಂದು ಉದಯಪುರ ಎಸ್ಪಿ ಶರ್ಮಾ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!