ಹೊಸದಿಗಂತ ವರದಿ,ಶಿವಮೊಗ್ಗ:
ಜಿಲ್ಲೆಯ ಪೊಲೀಸರಿಂದ ಬಂಧಿತರಾಗಿರುವ ಐಸಿಸ್ ನಂಟಿನ ಶಂಕಿತ ಭಯೋತ್ಪಾದಕರು ಕ್ರಿಪ್ಟೋ ಕರೆನ್ಸಿ ಮೂಲಕ ವ್ಯವಹಾರ ನಡೆಸಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ತಲೆಮರೆಸಿಕೊಂಡಿರುವ ಆರೋಪಿ ಶಾರೀಕ್ ಬಂತ ಇಬ್ಬರಿಗೆ ಕ್ರಿಪ್ಟೋ ಕರೆನ್ಸಿ ಮೂಲಕ ಬಾಂಬ್ ತಯಾರಿಕೆಗೆ ಹಣದ ವ್ಯವಸ್ಥೆ ಮಾಡಿದ್ದಾನೆ.
ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಬಿ.ಎಂ. ಲಕ್ಷ್ಮೀಪ್ರಸಾದ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.
ಆಗಸ್ಟ್ 15 ರಂದು ಪ್ರೇಮ್ ಸಿಂಗ್ ಚೂರಿ ಇರಿತ ಪ್ರಕರಣದಲ್ಲಿ ಬಂತರಾದ ನಾಲ್ವರು ಆರೋಪಿಗಳ ವಿಚಾರಣೆ ನಡೆಸಿದಾಗ ತೀರ್ಥಹಳ್ಳಿಯ ಶಾರೀಕ್ ಸಂಪರ್ಕದಲ್ಲಿ ಇರುವುದು ಕಂಡುಬಂದಿತ್ತು. ಹೆಚ್ಚಿನ ತನಿಖೆ ನಡೆಸಿದಾಗ ಶಾರೀಕ್ ಸಹಚರರಾಗಿ ಯಾಸಿನ್ ಮತ್ತು ಮಾಜ್ ಕೆಲಸ ಮಾಡಿರುವುದು ಕಂಡುಬಂದಿದೆ. ಅವರ ಮೇಲೆ ನಿಗಾ ಇರಿಸಿ ಬಂಸಲಾಗಿದೆ. ಶಾರೀಕ್ ತಪ್ಪಿಸಿಕೊಂಡಿದ್ದು, ಪತ್ತೆ ಕಾರ್ಯಾಚರಣೆ ನಡೆಯುತ್ತಿದೆ ಎಂದರು.