ಮೋದಿ ಸರಕಾರದ 5 ವರ್ಷ ‘ಗರೀಬ್ ಕಲ್ಯಾಣ ಅನ್ನಭಾಗ್ಯ ಯೋಜನೆ’ ವಿಸ್ತರಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸರ್ಕಾರ ‘ಗರೀಬ್ ಕಲ್ಯಾಣ ಅನ್ನಭಾಗ್ಯ ಯೋಜನೆ ಜ.1, 2024ರಿಂದ 5 ವರ್ಷ ವಿಸ್ತರಣೆ ಮಾಡಿ ಕೇಂದ್ರ ಸಚಿವ ಸಂಪುಟ ನಿರ್ಧಾರ ಮಾಡಿದೆ.

ಇಂದು ನಡೆ ಸಭೆಯಲ್ಲಿ ಪ್ರಧಾನಿ ಮೋದಿ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದು, ದೇಶದ 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಆಹಾರ ಧಾನ್ಯಗಳನ್ನು ಒದಗಿಸುವ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಐದು ವರ್ಷಗಳವರೆಗೆ ವಿಸ್ತರಿಸಲು ಅನುಮೋದನೆ ನೀಡಿದೆ.

ಕೋವಿಡ್ ಕಾಲದಲ್ಲಿ ಬಡವರ ಹಸಿವು ನೀಗಿಸಿದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯ ಬಗ್ಗೆ ಅಂತರಾಷ್ಟ್ರೀಯ ಹಣಕಾಸು ಸಂಸ್ಥೆ ಐಎಂಎಫ್ ಶ್ಲಾಘಿಸಿತ್ತು. ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಬಡವರಿಗೆ ಆಹಾರ ಒದಗಿಸುವ ಮೂಲಕ ಕಡುಬಡತನದಿಂದ ದೇಶವಾಸಿಗಳನ್ನು ಪಾರು ಮಾಡಲಾಗಿದೆ ಎಂದು ವರದಿಯಲ್ಲಿ ತಿಳಿಸಿತ್ತು. ವರದಿಯ ಪ್ರಕಾರ ಭಾರತದಲ್ಲಿ ದಿನಕ್ಕೆ 142 ರೂಪಾಯಿಗಿಂತ ಕಡಿಮೆ ಸರಾಸರಿ ಆದಾಯ ಇರುವ ಕಡುಬಡವರ ಸಂಖ್ಯೆ ಕೊರೋನಾ ಬಿಕ್ಕಟ್ಟಿನ 2020ರ ವರ್ಷದಲ್ಲಿಯೂ ಕೊರೋನಾ ಪೂರ್ವ 2019ರ ಮಟ್ಟದಲ್ಲಿ ಉಳಿದುಕೊಂಡಿದೆ. ಗರೀಬ್ ಕಲ್ಯಾಣ ಯೋಜನೆ ಬಡತನವನ್ನು ದೂರ ಮಾಡುವಲ್ಲಿ ನಿರ್ಣಾಯಕ ಪಾತ್ರ ವಹಿಸಿತ್ತು ಎಂದು ವರದಿಯಲ್ಲಿ ಹೇಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!