ಹೊಸದಿಂತ ಡಿಜಿಟಲ್ ಡೆಸ್ಕ್:
ಮುಂಬೈ ಛತ್ರಪತಿ ಸಂಭಾಜಿನಗರದ ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಸಾವಿಗೀಡಾದ ಆರು ಜನರ ಕುಟುಂಬಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ವಾಲುಜ್ ಕೈಗಾರಿಕಾ ಪ್ರದೇಶದಲ್ಲಿನ ಸನ್ಶೈನ್ ಎಂಟರ್ಪ್ರೈಸಸ್ ಘಟಕದಲ್ಲಿ ಮಧ್ಯರಾತ್ರಿ 1 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಹದಿಮೂರು ಕಾರ್ಮಿಕರು ಒಳಗೆ ಮಲಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೈಗವಸುಗಳನ್ನು ತಯಾರಿಸುವ ಘಟಕದ ಛಾವಣಿಯನ್ನು ಒಡೆದು ಏಳು ಮಂದಿ ಬೆಂಕಿಯಿಂದ ಪಾರಾಗುವಲ್ಲಿ ಯಶಸ್ವಿಯಾಗಿದ್ದರೆ.
ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ನೀಡುವಂತೆ ಹಾಗೂ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಭರಿಸುವಂತೆ ಶಿಂಧೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಹೇಳಿಕೆ ತಿಳಿಸಿದೆ.