ಬ್ಯಾಂಕ್‌ ದರೋಡೆ ಯತ್ನ ವಿಫಲ: ಆಂಧ್ರದಲ್ಲಿ 8 ಜನರ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಭ್ಯಾಂಕ್‌ ದರೋಡೆಗೆ ಯತ್ನಿಸಿ ವಿಫಲರಾಧ 8 ಜನರ ತಂಡವೊಂದನ್ನು ಆಂಧ್ರಪ್ರದೇಶದ ಚಿತ್ತೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ರಾಮಕುಪ್ಪಂ ಪೊಲೀಸ್ ಠಾಣಾ ವ್ಯಾಪ್ತಿಯ ವಿಜಲಪುರಂನಲ್ಲಿರುವ ಸಪ್ತಗಿರಿ ಗ್ರಾಮೀಣ ಬ್ಯಾಂಕ್ ದರೋಡೆಗೆ ಯತ್ನಿಸಿದ್ದರು ಎನ್ನಲಾಗಿದೆ.

ಆರೋಪಿಗಳಿಂದ ಎರಡು ಕಾರುಗಳು, ಗ್ಯಾಸ್ ಸಿಲಿಂಡರ್, ಗ್ಯಾಸ್ ಕಟ್ಟರ್ ಮತ್ತು ಆಮ್ಲಜನಕ ಸಿಲಿಂಡರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೇ 28ರಂದು ರಾತ್ರಿ ಸಪ್ತಗಿರಿ ಬ್ಯಾಂಕ್‌ ದರೋಡೆಗೆ ಯತ್ನಿಸಿದ್ದ ಆರೋಪಿಗಳು ವಿಫಲರಾಗಿದ್ದರು. ರಾಮಕುಪ್ಪಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ತನಿಖೆಗೆ ವಿಶೇಷ ತಂಡಗಳನ್ನು ರಚಿಸಲಾಗಿತ್ತು.

ಈ ಕುರಿತು ಖಚಿತ ಮಾಹಿತಿಯ ಮೇರೆಗೆ ಜೂ.2ರಂದು ದಾಳಿ ನಡೆಸಿದ ಪೋಲೀಸರು 8 ಜನರನ್ನು ಬಂಧಿಸಿದ್ದು ಒಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ವರದಿಯಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!