ಹೊಸದಿಗಂತ ಹಾಸನ :
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣ ಹಿನ್ನಲೆ ಮನನೊಂದು ಅಜ್ಜಿ ಮನೆಯಲ್ಲಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪಲಕೊಡು ಶ್ರೀಧರ್ ರೆಡ್ಡಿ (15) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಅಜ್ಜಿ ಮನೆಯಲ್ಲಿ ಆತ್ಮಹತ್ಯೆ ಶರಣಾಗಿರುವ ಪಲಕೊಡು ಶ್ರೀಧರ್ ರೆಡ್ಡಿ ಹಾಸನ ಜಿಲ್ಲೆ, ಅರಕಲಗೂಡು ತಾಲ್ಲೂಕಿನ, ಹಳ್ಳಿಮೈಸೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ.
ಬೇಸಿಗೆ ರಜೆ ಹಿನ್ನೆಲೆಯಲ್ಲಿ ಅಜ್ಜಿ ಮನೆಗೆ ತೆರಳಿದ್ದ ಪಲಕೊಡು ಶ್ರೀಧರ್ ರೆಡ್ಡಿ ಇಂದು ಪ್ರಕಟವಾದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣ ಆಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.