ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ವಾರಣಾಸಿಯಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನಕ್ಕೆ ಕೆನಡಾ ಪ್ರಜೆಯೊಬ್ಬ ಹುಸಿ ಬಾಂಬ್ ಬೆದರಿಕೆ ಹಾಕಿದ್ದಾನೆ.
ಈ ಘಟನೆ ಶನಿವಾರ ರಾತ್ರಿ ನಡೆದಿದ್ದು ಹೆಚ್ಚಿನ ವಿಚಾರಣೆಗಾಗಿ ಕೆನಡಾ ಪ್ರಜೆಯನ್ನು ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಆತ ತಾನು ವಿಮಾನದಲ್ಲಿ ಬಾಂಬ್ ಹೊತ್ತೊಯ್ಯುತ್ತಿರುವುದಾಗಿ ಹೇಳಿ ಪ್ರಯಾಣಿಕರಲ್ಲಿ ಬೆದರಿಕೆ ಮೂಡಿಸಿದ್ದ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಇಂಡಿಗೋ ಸಿಬ್ಬಂದಿ ವಾಯು ಸಂಚಾರ ನಿಯಂತ್ರಣಕ್ಕೆ (ATC) ತಿಳಿಸಿದ್ದಾರೆ. ಬಳಿಕ ವಿಮಾನವನ್ನು ತುರ್ತು ಲ್ಯಾಂಡ್ ಮಾಡಿ ಆತನನ್ನು ಬಂಧಿಸಲಾಗಿದೆ.
ಮಾಹಿತಿ ತಿಳಿದ ತಕ್ಷಣ ಇಂಡಿಗೋ ಸಿಬ್ಬಂದಿ ವಾಯು ಸಂಚಾರ ನಿಯಂತ್ರಣಕ್ಕೆ (ಎಟಿಸಿ) ತಿಳಿಸಿದ್ದು, ಇದರಿಂದ ವಿಮಾನವನ್ನು ಸಂಪೂರ್ಣ ಪರಿಶೀಲನೆ ನಡೆಸಲು ಐಸೋಲೇಷನ್ ಬೇಗೆ ಸ್ಥಳಾಂತರಿಸಲಾಯಿತು. ಇದು ಸುಳ್ಳು ಬೆದರಿಕೆ ಎಂದು ವಿಮಾನ ನಿಲ್ದಾಣದ ನಿರ್ದೇಶಕ ಪುನೀತ್ ಗುಪ್ತಾ ತಿಳಿಸಿದ್ದಾರೆ.
ವಿಮಾನವನ್ನು ಸ್ಟ್ಯಾಂಡರ್ಡ್ ಭದ್ರತಾ ಪ್ರೋಟೋಕಾಲ್ಗಳ ಪ್ರಕಾರ ನೆಲಕ್ಕೆ ಇಳಿಸಿ ತನಿಖೆ ನಡೆಸಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ವಿವರವಾದ ತನಿಖೆಯೂ ನಡೆಯುತ್ತಿದೆ. ಭದ್ರತಾ ಸಂಸ್ಥೆಗಳಿಂದ ಅನುಮತಿ ಪಡೆದ ಅತರ ವಿಮಾನ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಿತು.