ಹೊಸದಿಗಂತ ವರದಿ, ಹಾಸನ :
ಕೌಟುಂಬಿಕ ಕಲಹ ಹಿನ್ನಲೆ ಮನನೊಂದು ನೇಣುಬಿಗಿದುಕೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣವು ಬೇಲೂರು ತಾಲೂಕಿನ ಲಿಂಗಾಪುರ ಗ್ರಾಮದಲ್ಲಿ ನಡೆದಿದೆ.
ಹರಿಣಾಕ್ಷಿ (೪೦) ಆತ್ಮಹತ್ಯೆಗೆ ಶರಣಾದ ಮಹಿಳೆ. ಹದಿನಾರು ವರ್ಷಗಳ ಹಿಂದ ಲಿಂಗಾಪುರ ಗ್ರಾಮದ ಶೇಖರ್ ಜೊತೆ ಹರಿಣಾಕ್ಷಿ ವಿವಾಹವಾಗಿದ್ದರು. ಪತಿ ಪತ್ನಿಯನ್ನು ಅನುಮಾನದಿಂದ ನೋಡುತ್ತಿದ್ದ ಎಂಬ ವಿಚಾರಕ್ಕೆ ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಹಲವು ಬಾರಿ ಎರಡು ಕುಟುಂಬಗಳ ಹಿರಿಯರು ರಾಜಿ ಸಂಧಾನ ಮಾಡಿದ್ದರೂ ಪತಿ-ಪತ್ನಿ ನಡುವೆ ಜಗಲ ನಡೆಯುತ್ತಲೆ ಇತ್ತು ಇದರಿಂದ ಮನನೊಂದಿದ್ದ ಹರಿಣಾಕ್ಷಿ ಮನೆಯಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.