ಕೌಟುಂಬಿಕ ಕಲಹ: ಆತ್ಮಹತ್ಯೆಗೆ ಶರಣಾದ ವೃದ್ಧ ದಂಪತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಕೃಷ್ಣಯ್ಯ ಲೇಔಟ್‌ನಲ್ಲಿ ಕೌಟುಂಬಿಕ ಕಲಹದಿಂದ ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡಿ ಘಟನೆ ನಡೆದಿದೆ.

ಕೃಷ್ಣಂ ನಾಯ್ಡು (84) ಮತ್ತು ಸರೋಜಮ್ಮ (78) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು.

ಈ ದಂಪತಿಗೆ ಅಶೋಕ್ ಎಂಬ ಮಗನಿದ್ದಾನೆ. ಕೆಲವು ತಿಂಗಳ ಹಿಂದೆ, ಒಂದು ಮನೆಯ ಟೆರೇಸ್‌ನ ಕೋಣೆಯಲ್ಲಿ ತಮ್ಮ ಮಗನೊಂದಿಗೆ ವಯಸ್ಸಾದ ದಂಪತಿಗಳು ವಾಸಿಸುತ್ತಿದ್ದರು. ಗುರುವಾರ ಬೆಳಗ್ಗೆ 7:30ರ ಸುಮಾರಿಗೆ ಸೊಸೆ ನೀರು ತೆಗೆದುಕೊಂಡು ಬರಲು ಬಂದಾಗ ನೇಣು ಬಿಗಿದುಕೊಂಡಿರುವುದು ಬೆಳಕಿಗೆ ಬಂದಿದೆ.

ತಕ್ಷಣ ಘಟನಾ ಸ್ಥಳಕ್ಕೆ ಸೋಕೋ ಟೀಂ ಹಾಗೂ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವೃದ್ಧ ದಂಪತಿಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಈ ಬಗ್ಗೆ ಪ್ರಕರಣವನ್ನು ದಾಖಲು ಮಾಡಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!