ದಿಗಂತ ವರದಿ ವಿಜಯಪುರ:
ಕೌಟುಂಬಿಕ ಕಲಹದ ಹಿನ್ನೆಲೆ ಪತ್ನಿಗೆ ಪತಿಯೊಬ್ಬ ಚಾಕು ಇರಿದಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ತಾಳಿಕೋಟೆ ರಸ್ತೆಯಲ್ಲಿ ನಡೆದಿದೆ.
ಕವಡಿಮಟ್ಟಿ ಗ್ರಾಮದ ಯಲ್ಲಮ್ಮ ಸಿದ್ದಪ್ಪ ಕಾಳಗಿ (36) ಗಾಯಗೊಂಡವಳು. ಪತಿ ಸಿದ್ದಪ್ಪ ಕಾಳಗಿ ಎಂಬವನು ಪತ್ನಿ ಯಲ್ಲಮ್ಮಳಿಗೆ ಚಾಕು ಇರಿದು ಪರಾರಿಯಾಗಿದ್ದಾನೆ.
ಗಾಯಗೊಂಡ ಯಲ್ಲಮ್ಮಳನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆ ಜಿಲ್ಲಾಸ್ಪತ್ರೆ ದಾಖಲು ಮಾಡಲಾಗಿದೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.