ಕೌಟುಂಬಿಕ ಕಲಹ: ಇಬ್ಬರು ಮಕ್ಕಳೊಂದಿಗೆ ಕಾಲುವೆಗೆ ಹಾರಿದ ತಾಯಿ

ಹೊಸದಿಗಂತ ವರದಿ, ವಿಜಯಪುರ:

ಕೌಟುಂಬಿಕ ಕಲಹ ಹಿನ್ನೆಲೆ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳವಾರ ಸಂಜೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ನಡೆದಿದೆ.

ಇಲ್ಲಿನ ರೇಣುಕಾ ಅಮೀನಪ್ಪ ಕೋನಿನ್ (26 ), ಯಲ್ಲವ್ವ (2) ಅಮೃತಾ (1) ಮೃತಪಟ್ಟ ತಾಯಿ, ಮಕ್ಕಳಾಗಿದ್ದಾರೆ.

ಕೌಟುಂಬಿಕ ಕಲಹದಿಂದ ಬೇಸತ್ತ ರೇಣುಕು ತನ್ನ ಇಬ್ಬರು ಮಕ್ಕಳೊಂದಿಗೆ, ಗ್ರಾಮದ ಹೊರ ಭಾಗದಲ್ಲಿರೋ ಮುಳವಾಡ ಏತ ನೀರಾವರಿ ಯೋಜನೆಯ ಕಾಲುವೆಗೆ ಹಾರಿ ಸಾವನ್ನಪ್ಪಿದ್ದಾರೆ.

ಕಾಲುವೆಯಲ್ಲಿ ರೇಣುಕಾ ಹಾಗೂ ಓರ್ವ ಹೆಣ್ಣು ಮಗುವಿನ ಶವ ಪತ್ತೆ ಆಗಿದೆ. ಮತ್ತೋರ್ವ ಹೆಣ್ಣು ಮಗುವಿನ ಶವಕ್ಕಾಗಿ ಸ್ಥಳೀಯರು ಹಾಗೂ ಪೊಲೀಸರಿಂದ ಶೋಧ ಕಾರ್ಯ ನಡೆಯುತ್ತಿದೆ.

ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!