ಹೊಸದಿಗಂತ ವರದಿ,ವಿಜಯಪುರ
ಕೌಟುಂಬಿಕ ಕಲಹ ಹಿನ್ನೆಲೆ ಅಕ್ಕ ಹಾಗೂ ತಮ್ಮನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ನಡೆದಿದೆ.
ಇಲ್ಲಿನ ನಾನಾಗೌಡ ಯರಗಲ್ಲ, ರಾಜಶ್ರೀ ಯರಗಲ್ಲ ಹತ್ಯೆಯಾಗಿರುವವರು.
ಕೌಟುಂಬಿಕ ಕಲಹದ ಹಿನ್ನೆಲೆ ಅಕ್ಕನ ಗಂಡ ಶಂಕರಲಿಂಗ ಬಿರಾದಾರ ಹತ್ಯೆಗೈದು ಪರಾರಿಯಾಗಿದ್ದಾನೆ ಎಂದು ದೂರಲಾಗಿದೆ.
ಸಿಂದಗಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದು, ಕೊಲೆ ಆರೋಪಿ ಬಂಧನಕ್ಕೆ ಬಲೆ ಬಿಸಿದ್ದಾರೆ.
ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.