ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಖ್ಯಾತ ವಿಮರ್ಶಕ, ಕಥೆಗಾರ, ಕವಿ ಕೆ.ವಿ. ತಿರುಮಲೇಶ್ ನಿಧನರಾಗಿದ್ದಾರೆ.
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ತಿರುಮಲೇಶ್ ಅವರು ವಠಾರ ಸಂಕಲನದ ಮೂಲಕ ಜನಪ್ರಿಯರಾದವರು.
ಅನಾರೋಗ್ಯದಿಂದ ಬಳಲುತ್ತಿದ್ದ ತಿರುಮಲೇಶ್ ಅವರು ಹೈದರಾಬಾದ್ನ ತಮ್ಮ ಮಗಳ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇತ್ತೀಚೆಗೆ ಹೃದಯ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಕಳೆದ ಭಾನುವಾರವಷ್ಟೇ ಡಿಸ್ಚಾರ್ಜ್ ಆಗಿ ಮನೆಗೆ ಬಂದಿದ್ದರು.
ಕಾವ್ಯ, ಕಥೆ, ಕಾದಂಬರಿ ಹೀಗೆ ಹಲವು ಸಾಹಿತ್ಯ ಪ್ರಕಾರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ತಿರುಮಲೇಶ್ ಅವರು ಸಾಹಿತ್ಯ ವಿಮರ್ಶೆ ಮತ್ತು ಭಾಷಾ ವಿಜ್ಞಾನ ಕ್ಷೇತ್ರಗಳಲ್ಲಿಯೂ ಕಾರ್ಯನಿರ್ವಹಿಸಿದ್ದಾರೆ.
ಮುಖವಾಡಗಳು, ವಠಾರ, ಮಹಾಪ್ರಸ್ಥಾನ, ಮುಖಮುಖಿ, ಅವಧಿ, ಪಾಪಿಯೂ ತಿರುಮಲೇಶ್ ಅವರ ಕವನ ಸಂಕಲನಗಳು.