ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ, ನಿರ್ಮಾಪಕ ಕೆ.ಆರ್ ಮುರುಳಿ ಕೃಷ್ಣ ವಿಧಿವಶರಾಗಿದ್ದಾರೆ. ತೀವ್ರ ತಲೆನೋವಿನಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬ್ರೇನ್ ಟ್ಯೂಮರ್ ಎಂದು ವೈದ್ಯರು ತಿಳಿಸಿದ್ದು, ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಚಿಕಿತ್ಸೆ ನಂತರ ಹೃದಯಾಘಾತದಿಂದ ಮುರುಳಿ ಕೃಷ್ಣ ಮೃತಪಟ್ಟಿದ್ದಾರೆ.
ಇಡೀ ಕನ್ನಡ ಚಿತ್ರರಂಗವೇ ನಿರ್ದೇಶಕರ ನಿಧನಕ್ಕೆ ಸಂತಾಪ ಸೂಚಿಸುತ್ತಿದೆ. ಗರ ಸಿನಿಮಾಕ್ಕಾಗಿ ಬಾಲಿವುಡ್ನ ಜಾನಿ ಲಿವರ್ ಅವರನ್ನು ಕನ್ನಡಕ್ಕೆ ಕರೆತಂದಿದ್ದ ಖ್ಯಾತಿಯೂ ಇವರಿಗೆ ಸಲ್ಲುತ್ತದೆ.
ಸಹಕಾರ ನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.