ಟಾಲಿವುಡ್ ಖ್ಯಾತ ನಿರ್ದೇಶಕ, ನಟ ಸೂರ್ಯಕಿರಣ್ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟಾಲಿವುಡ್ ಖ್ಯಾತ ನಿರ್ದೇಶಕ, ನಟ ಸೂರ್ಯಕಿರಣ್ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಕೆಲವು ವರ್ಷಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸೋಮವಾರ ನಿಧನರಾದರು.
ಸೂರ್ಯ ಕಿರಣ್ ತೆಲುಗು ಮತ್ತು ತಮಿಳಿನಲ್ಲಿ 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ಬಾಲನಟನಾಗಿ ನಟಿಸಿದ್ದಾರೆ.ಅವರು ‘ಸತ್ಯಂ’ ಚಿತ್ರದ ಮೂಲಕ ನಿರ್ದೇಶಕರಾಗಿ ಹೆಸರು ಮಾಡಿದರು.

ತೆಲುಗು ಚಿತ್ರಗಳಾದ ಸತ್ಯಂ, ರಾಜು ಭಾಯ್ ಮತ್ತು ಇತರ ಕೆಲವು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಅವರು ಬಿಗ್ಬಾಸ್ ತೆಲುಗು ಕಾರ್ಯಕ್ರಮದ ಮಾಜಿ ಸ್ಪರ್ಧಿಯಾಗಿದ್ದರು.

ತಮ್ಮ ಆರಂಭಿಕ ವರ್ಷಗಳಲ್ಲಿ 200 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಕೆಲಸ ಮಾಡಿದರು. ನಂತರ ಅವರು ನಿರ್ದೇಶನಕ್ಕೆ ಎಂಟ್ರಿ ಕೊಟ್ಟು 2003 ರಲ್ಲಿ ಸುಮಂತ್ ಮತ್ತು ಜೆನಿಲಿಯಾ ನಟಿಸಿದ ‘ಸತ್ಯಂ’ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದರು ಮತ್ತು ಗಲ್ಲಾಪೆಟ್ಟಿಗೆಯಲ್ಲಿ ಅದ್ಭುತ ಯಶಸ್ಸನ್ನು ಗಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!