‘ಕಲಾಸಿಪಾಳ್ಯ’ ಚಿತ್ರದಲ್ಲಿ ನಟಿಸಿದ್ದ ಖ್ಯಾತ ಖಳನಟ ಪ್ರಕಾಶ್ ಹೆಗ್ಗೋಡು ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಂಗಭೂಮಿ ಮತ್ತು ಹಲವು ಚಲನಚಿತ್ರಗಳಲ್ಲಿ ನಟಿಸಿದ್ದ ಖ್ಯಾತ ಖಳನಟ ಪ್ರಕಾಶ್ ಹೆಗ್ಗೋಡು (58) ಮಾರ್ಚ್ 30, ಶನಿವಾರ ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನಟ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಪ್ರಕಾಶ್ ಹೆಗ್ಗೋಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಅವರ ಸಾವಿನ ಸುದ್ದಿ ತಿಳಿದ ಅಭಿಮಾನಿಗಳು, ಆಪ್ತರು, ಚಿತ್ರರಂಗದ ನಟ-ನಟಿಯರು ಕಂಬನಿ ಮಿಡಿದಿದ್ದಾರೆ.

ಪ್ರಕಾಶ್ ಹೆಗ್ಗೋಡು ಶಿವಮೊಗ್ಗ ಜಿಲ್ಲೆಯ, ಸಾಗರ ತಾಲೂಕಿನ ಪುರಪ್ಪೆಮನೆಯವರು. ಪುರಪ್ಪೆಮನೆಯಲ್ಲಿರುವ ಅವರ ಮನೆಯಲ್ಲಿ ಇಂದು ಅವರ ಅಂತಿಮ ದರ್ಶನ ಪಡೆಯಲು ಅವಕಾಶ ಮಾಡಿಕೊಡಲಾಗಿದೆ.

ಸಂತ, ಭಾಗ್ಯದ ಬಳೆಗಾರ, ಕಲ್ಪನಾ 2, ವೀರು, ಕಲಾಸಿಪಾಳ್ಯ ಸೇರಿದಂತೆ ಹಲವು ಕನ್ನಡ ಚಿತ್ರಗಳಲ್ಲಿ ಪ್ರಕಾಶ್ ಹೆಗ್ಗೋಡು ನಟಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!