ಹೊಸದಿಗಂತ ಡಿಜಿಟಲ್ ಡೆಸ್ಕ್:
‘ಡೆವಿಲ್’ ಚಿತ್ರದ ಶೂಟಿಂಗ್ ವೇಳೆ ಸ್ಯಾಂಡಲ್ ವುಡ್ ನಟ ದರ್ಶನ್ ಕೈಗೆ ಗಾಯ ಮಾಡಿಕೊಂಡಿದ್ದರು. ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದರ್ಶನ್ ಕೈಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಸದ್ಯ ಅವರು ವಿಶ್ರಾಂತಿಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಏ.4ರಂದು ಮಂಡ್ಯದಲ್ಲಿ ಸುಮಲತಾ ಅವರ ಬಹಿರಂಗ ಸಭೆಯಲ್ಲಿ ದರ್ಶನ್ ಕೂಡ ಭಾಗವಹಿಸಿದ್ದರು. ಇದೇ ವೇಳೆ ಬೆಂಬಲಿಗರ ಸಭೆಯಲ್ಲಿ ಆಪರೇಷನ್ ಆಗಲಿದೆ ಎಂದು ಸ್ವತಃ ದರ್ಶನ್ ಹೇಳಿಕೆ ನೀಡಿದ್ದರು.
“ದಿ ಡೆವಿಲ್” ಚಿತ್ರದ ಸಾಹಸ ಸ್ಕ್ರಿಪ್ಟ್ ಚಿತ್ರೀಕರಣದ ಸಮಯದಲ್ಲಿ, ಅವರ ಕೈಗೆ ಏಟು ಬಿದ್ದಿದೆ. ಕೈಗೆ ಬೆಲ್ಟ್ ಕಟ್ಟಿಕೊಂಡು ಈವರೆಗೂ ಓಡಾಡುತ್ತಿದ್ದರು. ಇದೀಗ ವೈದ್ಯರ ಸಲಹೆ ಮೇರೆಗೆ ದರ್ಶನ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆಯ ನಂತರ ನಟ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂಬ ಸುದ್ದಿಯಿಂದ ಅಭಿಮಾನಿಗಳು ಕೂಡ ಸಂತಸಗೊಂಡಿದ್ದಾರೆ.