ವಿದ್ಯುತ್‌ ಸ್ಪರ್ಶಕ್ಕೆ ಅಭಿಮಾನಿಗಳು ಸಾವು: ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ ನಟ ಯಶ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಟೌಟ್ ನಿಲ್ಲಿಸುವುದಕ್ಕೆ ಹೋಗಿ ವಿದ್ಯುತ್ ಸ್ಪರ್ಶದಿಂದ ನಿಧನರಾಗಿರುವ ಮೂವರ ಅಭಿಮಾನಿಗಳ ಕುಟುಂಬಸ್ಥರನ್ನುನಟ ಯಶ್ (Yash) ಭೇಟಿ ಮಾಡಲು ಗದಗದ ಸೊರಣಗಿ ಬಂದಿದ್ದಾರೆ. ಅಭಿಮಾನಿಗಳ ಕುಟುಂಬಕ್ಕೆ ಸಾಂತ್ವಾನ ನೀಡಿದ್ದಾರೆ.

ಮೃತ ಮುರಳಿ ತಂದೆ ಕೈ ಹಿಡಿದು ಯಶ್‌ ಧೈರ್ಯ ತುಂಬಿದ್ದಾರೆ. 3 ಜನ ಮೃತರ ಮನೆಗೆ ಯಶ್‌ ಭೇಟಿ ನೀಡಿದ್ದಾರೆ. ಮೊದಲು ಮೃತ ಮುರಳಿ ಮನೆಗೆ ತೆರಳಿ, ಅವರ ತಂದೆಗೆ ಧೈರ್ಯ ಹೇಳಿ, ಮೃತ ನವೀನ್‌ ಗಾಜಿ ಮತ್ತು ಹನುಮಂತ ಹರಿಜನ್‌ ಮನೆಗೆ ಭೇಟಿ ಯಶ್‌ ಸಾಂತ್ವನ ಹೇಳಿದ್ದಾರೆ.

ಯಶ್ ಹುಟ್ಟುಹಬ್ಬಕ್ಕೆ ಬೃಹತ್ ಗಾತ್ರದ ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶದಿಂದ 3 ಜನ ಸಾವನ್ನಪ್ಪಿದ ಘಟನೆ ಲಕ್ಷ್ಮೇಶ್ವರ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಮೃತರನ್ನು ಹನುಮಂತ ಹರಿಜನ್ (24), ಮುರಳಿ ನಡುವಿನಮನಿ (20) ಹಾಗೂ ನವೀನ್ ಗಾಜಿ (20) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮಂಜುನಾಥ್, ಪ್ರಕಾಶ್ ಹಾಗೂ ಹನುಮಂತ ಎಂಬವರಿಗೆ ಗಂಭೀರ ಗಾಯಾಳಾಗಿವೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!