IPL | ಗುರು-ಶಿಷ್ಯರ ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಫ್ಯಾನ್ಸ್‌, ಬೌಲಿಂಗ್‌ ಮಾಡುವಾಗ್ಲೇ ಸಿರಾಜ್‌ ಭಾವುಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು.

ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡರು. ಅಲ್ಲದೆ ಮೊದಲ ಓವರ್​ ಎಸೆಯಲು ಮೊಹಮ್ಮದ್ ಸಿರಾಜ್​ಗೆ ಚೆಂಡು ನೀಡಿದರು. ಇಡೀ ಸ್ಟೇಡಿಯಂ ಈ ಆಟಕ್ಕಾಗಿ ಕಾಯುತ್ತಾ ಇತ್ತು. ಗುರು-ಶಿಷ್ಯರ ಮುಖಾಮುಖಿಗೆ ಇಡೀ ಸ್ಟೇಡಿಯಂ ಸಾಕ್ಷಿಯಾಗಿತ್ತು.

ಮೊಹಮ್ಮದ್ ಸಿರಾಜ್ ಎಸೆದ ಪ್ರಥಮ ಓವರ್​ನ ಮೊದಲ ಎಸೆತವನ್ನು ಫಿಲ್ ಸಾಲ್ಟ್ ಎದುರಿಸಿದರು. ಅಲ್ಲದೆ ಒಂದು ರನ್ ಕಲೆಹಾಕುವ ಮೂಲಕ ವಿರಾಟ್ ಕೊಹ್ಲಿಗೆ ಸ್ಟ್ರೈಕ್ ನೀಡಿದರು. ಆದರೆ 2ನೇ ಎಸೆತ ಎಸೆಯುವ ಮುನ್ನ ಮೊಹಮ್ಮದ್ ಸಿರಾಜ್ ಭಾವುಕರಾಗಿ ಕಂಡು ಬಂದರು. ಬೌಲಿಂಗ್‌ ಮಾಡಲೆಂದು ಬಂದು ಆಗದೇ ಹಿಂದೆ ಹೋದರು. ಈ ವಿಡಿಯೋ ಎಲ್ಲೆಡೆ ವೈರಲ್‌ ಆಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಮೊಹಮ್ಮದ್ ಸಿರಾಜ್ 7 ವರ್ಷಗಳ ಕಾಲ ಆಡಿದ್ದರು. ಈ ವೇಳೆ ಸಿರಾಜ್ ಬೆಂಬಲಕ್ಕೆ ನಿಂತವರು ವಿರಾಟ್ ಕೊಹ್ಲಿ. ಕೊಹ್ಲಿಯ ಸಂಪೂರ್ಣ ಬೆಂಬಲದೊಂದಿಗೆ ನಾನು ಈ ಮಟ್ಟಕ್ಕೆ ತಲುಪಿದ್ದೇನೆ ಎಂದು ಹಲವು ಬಾರಿ ಸಿರಾಜ್ ಹೇಳಿಕೊಂಡಿದ್ದರು.

 

View this post on Instagram

 

A post shared by ___Surya Royyyyyyy___ (@suryaroy4874)

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!