ಸಾಲಬಾಧೆ ತಾಳದೆ ರೈತ ಆತ್ಮಹತ್ಯೆ

ಹೊಸದಿಗಂತ ವರದಿ,ವಿಜಯಪುರ:

ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಯಂಕಂಚಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಇಲ್ಲಿನ ಯಲ್ಲಾಲಿಂಗ ಹಣಮಂತ ತಳವಾರ (30) ಆತ್ಮಹತ್ಯೆಗೆ ಶರಣಾಗಿರುವ ರೈತ.

ಕೆವಿಜಿ ಬ್ಯಾಂಕ್, ಪಿಕೆಪಿಎಸ್‌ನಲ್ಲಿ 6 ಲಕ್ಷ ಸೇರಿದಂತೆ ಕೈಗಡ ಸಾಲ ಮಾಡಿಕೊಂಡಿದ್ದ, ಹೊಲದಲ್ಲಿ ಬೆಳೆ ಬರದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ‌

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!