ಹೊಸದಿಗಂತ ವರದಿ ಕಲಬುರಗಿ:
ತೊಗರಿ ಬೆಳೆ ನೆಟೆ ರೋಗದಿಂದ ಹಾಳಾಗಿದ್ದರಿಂದ ಮನನೊಂದು ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕಾಳಗಿ ತಾಲೂಕಿನ ಕೊಡದೂರು ಗ್ರಾಮದಲ್ಲಿ ನಡೆದಿದೆ.
ಸಂತೋಷ ಕುಮಾರ್ ಜಾಧವ ಮೃತ ದುರ್ದೈವಿಯಾಗಿದ್ದು, ಕೊಡದುರು ಗ್ರಾಮದ ಏರಟೆಲ್ ಟವರ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಭಾನುವಾರ ಬೆಳ್ಳಂಬೆಳಿಗ್ಗೆ ಏರಟೆಲ್ ಟವರ್ ಮೇಲೆ ಶವ ನೇತಾಡುವುದನ್ನು ಕಂಡ ಗ್ರಾಮಸ್ಥರು ಗಾಬರಿಯಾಗಿದ್ದಾರೆ. 150 ಕ್ಟಿಂಟಲ್ ಆಗಬೇಕಿದ್ದ ತೊಗರಿ ರೋಗದಿಂದ ಬರೀ 30 ಕ್ಟಿಂಟಲ್ ಆದ ಹಿನ್ನೆಲೆಯಲ್ಲಿ ನೊಂದು ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸಾಲ ಮಾಡಿ ಬೆಳೆದ ಮೇಲೆ ಸರಿಯಾಗಿ ಫಸಲು ಬಾರದ ಹಿನ್ನೆಲೆಯಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಸರ್ಕಾರ ಕೂಡಲೇ ರೈತರ ನೆರವಿಗೆ ಧಾವಿಸುವ ಅನಿವಾರ್ಯ ಎದುರಾಗಿದೆ. ಘಟನೆ ಸಂಬಂಧ ಕಾಳಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.