ಹೊಲದಲ್ಲಿ ಕಾರ್ಯನಿರ್ವಹಿಸುವಾಗ ಹಾವು ಕಚ್ಚಿ ರೈತ ಸಾವು

ಹೊಸದಿಗಂತ ವರದಿ, ಯಲಬುರ್ಗಾ:
ತಾಲ್ಲೂಕಿನ ಮಲಕಸಮುದ್ರ ಗ್ರಾಮದಲ್ಲಿ ರೈತರೊಬ್ಬರು ಹಾವು ಕಚ್ಚಿ ಮೃತಪಟ್ಟಿದ್ದಾರೆ.
ಶರಣಪ್ಪ ದುರಗಪ್ಪ ಹರಿಜನ (52) ಮೃತರು. ತಮ್ಮ ಹೊಲದಲ್ಲಿ ಕಸ ತೆಗೆಯುತ್ತಿದ್ದಾಗ ಹಾವು ಕಚ್ಚಿದೆ. ಬಳಿಕ ರೈತರನ್ನು ಯಲಬುರ್ಗಾ ಆಸ್ಪತ್ರೆಗೆ ಕರೆ ತರಲಾಗಿದೆ. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಮೃತ ರೈತರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಒತ್ತಾಯಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!