ರಾಜ್ಯಾದ್ಯಂತ ಬೇಸಿಗೆ ಮಳೆ, ಸಿಡಿಲಿನ ಹೊಡೆತಕ್ಕೆ ರೈತ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಬೇಸಿಗೆ ಮಳೆಯಾಗಿದ್ದು, ಬಿಸಿಲಿನ ಬೇಗೆಯಿಂದ ಸುಡುತ್ತಿದ್ದ ಭೂಮಿಗೆ ತಂಪಾಗಿದೆ. ಎಂಟು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಹಾವೇರಿಯ ಶಿಗ್ಗಾಂವಿ ತಾಲೂಕಿನಲ್ಲಿ ಸಿಡಿಲಿಗೆ ರೈತರೊಬ್ಬರು ಬಲಿಯಾಗಿದ್ದಾರೆ.

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು, ರಾಮನಗರ, ಹಾಸನ, ರಾಯಚೂರು, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಜೋರು ಮಳೆಯಾಗಿದೆ. ಶಿಗ್ಗಾವಿ ತಾಲೂಕಿನ ತಡಸ ಗ್ರಾಮದ ರೈತರಾದ ತಡಸದ ಗೌಡ್ರ ಓಣಿ ನಿವಾಸಿ ನಿಂಗನಗೌಡ ಸಿದ್ದನಗೌಡ ಪಾಟೀಲ ಸಿಡಿಲಿನಿಂದ ಮೃತಪಟ್ಟಿದ್ದಾರೆ, ಜಮೀನಿನಲ್ಲಿ ಕೃಷಿ ಕೆಲಸ ಮುಗಿಸಿ ಮನೆಗೆ ಬರುವ ವೇಳೆ ಸಿಡಿಲು ಬಡಿದಿದೆ.

ರಾಜಧಾನಿ ಬೆಂಗಳೂರಿನಲ್ಲಿಯೂ ರಾತ್ರಿಯಿಡೀ ಮಳೆ ಸುರಿದಿದ್ದು, ಬೆಳಗ್ಗೆಯೂ ಮೋಡ ಕವಿದ ವಾತಾವರಣವಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!