ಹೊಸದಿಗಂತ ವರದಿ ಮಂಡ್ಯ:
ಹೆಜ್ಜೇನು ದಾಳಿಗೆ ರೈತನೋರ್ವ ಮೃತಪಟ್ಟಿರುವ ಘಟನೆ ಪಾಂಡವಪುರ ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ. ಗ್ರಾಮದ ಮಹದೇವು (57) ಮೃತಪಟ್ಟ ರೈತ. ಗ್ರಾಮದ ಹೊರ ವಲಯದಲ್ಲಿರುವ ತಮ್ಮ ಜಮೀನಿನಲ್ಲಿ ಕೃಷಿ ಕೆಲಸದಲ್ಲಿ ತೊಡಗಿದ್ದ ವೇಳೆ ಹೆಜ್ಜೇನು ದಾಳಿ ಮಾಡಿದೆ. ಹೆಜ್ಜೇನು ದಾಳಿಯಿಂದಾಗಿ ಅಸ್ವಸ್ಥಗೊಂಡ ರೈತ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಜೊತೆಗೆ ಹೊಲದಲ್ಲಿ ಮೇಯುತ್ತಿದ್ದ ಮೇಕೆ ಮತ್ತು ಹಸುವಿನ ಮೇಲೂ ಸಹ ಹೆಜ್ಜೇನು ದಾಳಿ ಮಾಡಿವೆ. ಮೃತ ರೈತ ಮಹದೇವು ಅವರಿಗೆ ಸರ್ಕಾರ 5 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.