ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಗಲಕೋಟೆಯಲ್ಲಿ ಇಂದು ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, ಜಿಲ್ಲೆಯಲ್ಲಿ ಕುಡಿಯುವ ನೀರು ಕಡಿಮೆ ಇದೆ. ರೈತರು ಸಂಕಷ್ಟದಲ್ಲಿದ್ದರೂ ಸರಕಾರ ಕೈ ಕಟ್ಟಿ ಕುಳಿತಿದೆ ಎಂದು ಟೀಕಿಸಿದರು. ಇಂತಹ ಬೇಜವಾಬ್ದಾರಿ ಸರ್ಕಾರಕ್ಕೆ ಕರ್ನಾಟಕದಲ್ಲಿ ಮುಂದುವರೆಯುವ ನೈತಿಕ ಹಕ್ಕಿಲ್ಲ ಎಂದರು.
ಕಾಂಗ್ರೆಸ್ ನಕಲಿ ಪಕ್ಷ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ. ಮೋದಿಜಿಯವರ ಆಶ್ವಾಸನೆ ಎಂದರೆ ಅಭಿವೃದ್ಧಿಯ ಭರವಸೆ. ಎಲ್ಲ 28 ಸ್ಥಾನಗಳಲ್ಲೂ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ದೇಶಾದ್ಯಂತ ಮೋದಿ ಬೆಂಬಲದ ಅಲೆ ಎದ್ದಿದೆ. ಜನರ ಉತ್ಸಾಹವನ್ನು ಗಮನಿಸಿದರೆ ಈ ಬಾರಿ 28 ಜಿಲ್ಲೆಗಳಲ್ಲಿ ಗೆಲುವು ಸಾಧಿಸುತ್ತೇವೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಜನ ಬೇಸತ್ತಿದ್ದಾರೆ. ಬಿಜೆಪಿ ಗೆಲುವು ನಿಶ್ಚಿತ ಎಂದರು.