ದೆಹಲಿಯಲ್ಲಿ ಪ್ರತಿಭಟನೆಗೆ ರೈತರು ಸಜ್ಜು: ಪಂಜಾಬ್ ಗೆ ಡೀಸೆಲ್, ಗ್ಯಾಸ್ ಸರಬರಾಜು ಕಡಿತ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯಲ್ಲಿ ರೈತರು ಪ್ರತಿಭಟನೆಗೆ ಸಜ್ಜಾಗುತ್ತಿದ್ದು, ಇತ್ತ ಪಂಜಾಬ್ ಗೆ ಸರಬರಾಜಾಗುತ್ತಿದ್ದ ಡೀಸೆಲ್ ಮತ್ತು ಗ್ಯಾಸ್ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂದು ಹೇಳಲಾಗಿದೆ.

ದೆಹಲಿಯಲ್ಲಿ ರೈತರು ನಡೆಸುತ್ತಿರುವ ಬೃಹತ್ ಪ್ರತಿಭಟನೆಯ ಹಿನ್ನಲೆಯಲ್ಲಿ ಪಂಜಾಬ್ ಗೆ ರವಾನೆಯಾಗಬೇಕಿದ್ದ ಡೀಸೆಲ್ ಮತ್ತು ಗ್ಯಾಸ್ ಸರಬರಾಜಿನಲ್ಲಿ ಇಳಿಕೆಯಾಗಿದೆ ಎಂದು ಹೇಳಲಾಗಿದೆ. ಪಂಜಾಬ್ ಗೆ ಸರಬರಾಜಾಗುವ ಡೀಸೆಲ್ ಪ್ರಮಾಣದಲ್ಲಿ ಶೇ.50ರಷ್ಟು ಮತ್ತು ಗ್ಯಾಸ್ ಸರಬರಾಜಿನಲ್ಲಿ ಶೇ.20ರಷ್ಟು ಇಳಿಕೆಯಾಗಿದೆ ಎಂದು ಹೇಳಲಾಗಿದೆ.

ರೈತರ ಪ್ರತಿಭಟನೆ ಹಿನ್ನಲೆಯಲ್ಲಿ ಗಡಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ಥವಾಗಿದ್ದು, ಡೀಸೆಲ್ ಮತ್ತು ಗ್ಯಾಸ್ ಸರಬರಾಜಿನ ಮೇಲೆ ಪರಿಣಾಮ ಬೀರಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ವಿವಿಧ ರಾಜ್ಯಗಳ ಪ್ರತಿಭಟನಾನಿರತ ರೈತರು ಪಂಜಾಬ್ನಿಂದ ದೆಹಲಿಗೆ ಮೆರವಣಿಗೆಯನ್ನು ಪ್ರಾರಂಭಿಸಿದ್ದು, ಈಗಾಗಲೇ ದೆಹಲಿ ಸಂಪರ್ಕಿಸುವ ಎಲ್ಲ ಗಡಿಗಳಲ್ಲಿ ವ್ಯಾಪಕ ಭದ್ರತೆ ನಿಯೋಜಿಸಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!