ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿಯಲ್ಲಿ ಹಬ್ಬದ ಸಂಭ್ರಮ ಕಳೆಕಟ್ಟಿದೆ. ಇಂದು ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇತ್ತ ಪದಗ್ರಹಣ ಸಮಾರಂಭ ಮನೆ ಮಾಡಿದ್ರೆ, ಅತ್ತ ಬೆಳಗಾವಿಯಲ್ಲಿ ಪ್ರತಿಭಟನೆಯ ಕಾವು ಜೋರಾಗಿದೆ.
ಯಾಕೆಂದರೆ ಇಂದು ಎರಡನೇ ಬಾರಿ ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸಮಾರಂಭ ಮಾಡದಿದ್ದಕ್ಕೆ ಆಕ್ರೋಶ ಹೊರಹಾಕಿದ್ದಾರೆ.
ಹೊಸ ಸರ್ಕಾರದ ಪ್ರಮಾಣವಚನ ಸಮಾರಂಭ ಬೆಳಗಾವಿಯಲ್ಲಿ ಆಯೋಜಿಸಬೇಕಿತ್ತು ಎಂದು ರೈತರು ಬೆಳಗಾವಿ ಸುವರ್ಣ ವಿಧಾನಸೌಧ ಎದುರು ಖಾಲಿ ಕೊಡದೊಂದಿಗೆ ಪ್ರತಿಭಟನೆ ನಡೆಸುತ್ತಿದ್ದಾರೆ.