ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಇದೀಗ ಮತ್ತೆ ಕಾವೇರಿ ನೀರು ಬಿಡುಗಡೆ ವಿಷಯ ಮುನ್ನೆಲೆಗೆ ಬಂದಿದ್ದು, ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ತಡೆದು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಪೊಲೀಸರು ಪ್ರತಿಭಟನಾನಿರತ ರೈತರನ್ನು ವಶಕ್ಕೆ ಪಡೆದಿದ್ದಾರೆ. ಎತ್ತಿನಗಾಡಿ, ಟ್ರ್ಯಾಕ್ಟರ್ ಹಾಗೂ ಜಾನುವಾರುಗಳ ಸಮೇತ ರೈತರು ರಸ್ತೆಗಿಳಿದಿದ್ದು, ಹೆದ್ದಾರಿ ತಡೆಯದಂತೆ ಪೊಲೀಸರು ಬ್ಯಾರಿಕೇಡ್ ಹಾಕಿದ್ದಾರೆ.
ಬ್ಯಾರಿಕೇಡ್ ಮುರಿದು ರೈತರು ಮುಂದೆ ಬಂದಿದ್ದು, ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ. ಇದರಿಂದಾಗಿ ಹೆದ್ದಾರಿಯ ಒಂದು ಭಾಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.