ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ್ ಜೋಡೋ ಯಾತ್ರೆಯ ಕೊನೆಯ ಹಂತ ತಲುಪಿದ್ದು, ರಾಹುಲ್ ಗಾಂಧಿ (Rahul Gandhi) ಅವರು ಜಮ್ಮು-ಕಾಶ್ಮೀರ ತಲುಪಿದ್ದಾರೆ.
ಇಲ್ಲಿ ಸಾರ್ವಜನಿಕ ಸಭೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ವರಿಷ್ಠ, ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು ರಾಹುಲ್ ಗಾಂಧಿ ಅವರನ್ನು ಅದ್ವೈತ ಸಿದ್ಧಾಂತದ ಪ್ರತಿಪಾದಕರಾದ ಆದಿ ಶಂಕರಾಚಾರ್ಯರಿಗೆ ಹೋಲಿಸಿದ್ದಾರೆ.
ಆದಿ ಶಂಕರಾಚಾರ್ಯರ ನಂತರ ರಾಹುಲ್ ಗಾಂಧಿ ಅವರು ಮಾತ್ರ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಯಾತ್ರೆ ಕೈಗೊಂಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಒಂದು ಕಾಲದಲ್ಲಿ ಗಾಂಧೀಜಿಯವರ ಭಾರತ ಹಾಗೂ ಶ್ರೀರಾಮನ ಭಾರತವು ಎಲ್ಲರೂ ಒಂದೇ ಎಂಬುದಾಗಿತ್ತು. ಆದರೆ, ಈಗ ಪರಿಸ್ಥಿತಿ ಬದಲಾಗಿದೆ. ಆದರೆ, ರಾಹುಲ್ ಗಾಂಧಿಯವರು ಕೈಗೊಳ್ಳುತ್ತಿರುವ ಯಾತ್ರೆಯು ಭಾರತವನ್ನು ಒಗ್ಗೂಡಿಸುವುದಾಗಿದೆ ಎಂದರು.