ಬೈಕ್-ಕೆಎಸ್ಆರ್ ಟಿಸಿ ಬಸ್ ನಡುವೆ ಭೀಕರ ಅಪಘಾತ: ಓರ್ವ ದಾರುಣ ಸಾವು

ಹೊಸದಿಗಂತ ತುಮಕೂರು :

ತಿಪಟೂರು ತಾಲ್ಲೂಕಿನ ನೊಣವಿನಕೆರೆ ಹೋಬಳಿ ಆಲ್ಬೂರು ಕೆರೆ ಏರಿ ಮೇಲೆ ಬೈಕ್ ಗೆ ಕೆ.ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.

ತುರುವೇಕೆರೆ ಟೌನ್ ವಾಸಿ ಯೋಗೇಶ್ ಬಿನ್ ಬಸವರಾಜು, ಮೆಕ್ಯಾನಿಕ್ ಕೆಲಸ ಹಾಗೂ ದಯಾನಂದ ಬಿನ್ ಶ್ರೀನಿವಾಸ್ ವೆಲ್ಡಿಂಗ್ ಕೆಲಸ ಇಬ್ಬರು ಬೈಕ್ ನಲ್ಲಿ ತೆರಳುವಾಗ ಆಲ್ಬೂರು ಕೆರೆಎರಿ ಮೇಲೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದಪರಿಣಾಮ ಬೈಕ್ ಸವಾರರಿಬ್ಬರು ಸಾವನ್ನಪ್ಪಿರುತ್ತಾರೆ. ಸ್ಥಳಕ್ಕೆ ನೊಣವಿನಕೆರೆ ಪೊಲೀಸರು ಭೇಟಿ ನೀಡಿಪರಿಶೀಲನೆ ನಡೆಸಿದ್ದು ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!