ಹೊಸದಿಗಂತ ವರದಿ, ಮಂಡ್ಯ:
ಕಾರು ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲೂಕಿನ ಕಣಿಗಲ್ ಗೇಟ್ ಬಳಿ ತಡರಾತ್ರಿ ನಡೆದಿದೆ.
ಬೆಂಗಳೂರು ಮೂಲದ ರವಿಕುಮಾರ್ (50), ಭಾಸ್ಕರ (48), ಮದ್ದೂರಿನ ಶ್ರೀನಿವಾಸ್ (35) ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
ಮೃತ ರವಿಕುಮಾರ್ ಜಯಕರ್ನಾಟಕ ಜನಪದ ವೇದಿಕೆ ರಾಜ್ಯ ಘಟಕದ ಕಾರ್ಯದರ್ಶಿಯಾಗಿದ್ದು, ಹುಟ್ಟೂರು ಕಣಿಕಹಳ್ಳಿಗೆ ಭೇಟಿ ನೀಡಿ ವಾಪಸ್ಸು ಬೆಂಗಳೂರಿಗೆ ಈ ದುರ್ಘಟನೆ ನಡೆದಿದೆ.
ಕಾರಿನಲ್ಲಿದ್ದ ಇಬ್ಬರ ಸ್ಥಿತಿ ಸಹ ಗಂಭೀರವಾಗಿದ್ದು, ಮಳವಳ್ಳಿ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸಾಗಿಸಿದ್ದಾರೆ.
ಈ ಸಂಬಂಧ ಮಳವಳ್ಳಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ