ಸುಳ್ಯದಲ್ಲಿ ಕೆಎಸ್ ಆರ್ ಟಿಸಿ ಬಸ್ ಗಳ ನಡುವೆ ಭೀಕರ ಅಪಘಾತ: ಮಹಿಳೆ ಸಾವು, 20ಕ್ಕೂ ಅಧಿಕ ಮಂದಿಗೆ ಗಾಯ

 ಹೊಸದಿಗಂತ ವರದಿ,ಸುಳ್ಯ:

ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅರಂತೋಡು ಬಳಿ ಕೆಎಸ್ಆರ್ಟಿಸಿ ಬಸ್‌ಗಳ ನಡುವಿನ ಅಪಘಾತದಲ್ಲಿ ಒರ್ವ ಮಹಿಳೆ ಮೃತಪಟ್ಟು, ಇಪ್ಪತ್ತಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಬುಧವಾರ ಸಂಜೆ ಸಂಭವಿಸಿದೆ.

ಮಂಗಳೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಹಾಗೂ ಮಡಿಕೇರಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್‌ಗಳ ಮಧ್ಯೆ ಅರಂತೋಡು ಬಳಿಯ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಮಂಗಳೂರಿಗೆ ಚಿಕಿತ್ಸೆಗೆ ತೆರಳಿ ಮಡಿಕೇರಿಗೆ ಹಿಂತಿರುಗುತ್ತಿದ್ದ ಕುಶಾಲನಗರದ ಗುಡ್ಡೆ ಹೊಸೂರು ಭಾರತಿ (50) ಎಂಬವರು ತೀವ್ರ ಗಾಯಗೊಂಡಿದ್ದು, ಸ್ಥಳದಲ್ಲೇ ಮೃತರಾಗಿದ್ದಾರೆ.

ಚೈತ್ರ (22), ಮಾಯಿಲ್ಪ (43), ಶ್ರಾವ್ಯಶ್ರೀ (24), ಕುಮುದಿನಿ (24), ಯಮುನಾ (55), ವೇದಿಕಾ (10), ಯಕ್ಷಿತಾ (22), ಸಮದ್ (38), ಮುತ್ತಮ್ಮ (37), ಚಂದ್ರಾವತಿ (43), ತಿರುಮಲೇಶ್ವರ (49), ಸೋನಿ ಹೆಚ್.ಪಿ. (21), ಚಿದಾನಂದ (42), ನಯನ ವಿತೋಬಾರಾವ್ (25), ಸುಬ್ರಮಣಿ (51), ಕಾವೇರಮ್ಮ (35), ಅಭಿಲಾಷ್ (21), ಜಯಂತ್ (17), ಕರಣ್ (37) ಮೊದಲಾದವರು ಸುಳ್ಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇನ್ನು ಕೆಲವರು ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ‌ ಇದರಲ್ಲಿ ಇಬ್ಬರು ತೀವ್ರ ಗಾಯಗೊಂಡಿದ್ದು ಇವರನ್ನು ಮಂಗಳೂರಿನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದ್ದು ಆಸ್ಪತ್ರೆಗೆ ಕೆಎಸ್ಆರ್ಟಿಸಿ ಅಧಿಕಾರಿಗಳು ಭೇಟಿ ನೀಡಿದ್ದು ಈ ಕುರಿತು ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!