ಟಿಪ್ಪರ್‌-ಬೈಕ್‌ ನಡುವೆ ಭೀಕರ ಅಪಘಾತ: ಯುವಕ ಸಾವು

ಹೊಸದಿಗಂತ ವರದಿ, ಮಳವಳ್ಳಿ:

ಟಿಪ್ಪರ್‌ವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿ ಮತ್ತೊಬ್ಬ ಗಾಯಗೊಂಡಿರುವ ಘಟನೆ ಪಟ್ಟಣದ ಅನಂತ್‌ರಾಅ ವೃತ್ತದ ಆವರಣದಲ್ಲಿ ನಡೆದಿದೆ.

ನೆಲಮಾಕನಹಳ್ಳಿ ಗ್ರಾಮದ ಪುಟ್ಟಸ್ವಾಮಿ ಎಂಬುವವರ ಪುತ್ರ ಯಶ್ವಂತ್(20) ಸಾವನ್ನಪ್ಪಿದ ದುರ್ದೈವಿಯಾಗಿದ್ದು, ಮೃತರ ತಮ್ಮ ವಸಂತ್(17) ಗಾಯಗೊಂಡವರಾಗಿದ್ದಾರೆ.

ಹಂದಿಗಳಿಗೆ ಬೂಸ ತೆಗೆದುಕೊಂಡು ಕೊಂಡು ಮಳವಳ್ಳಿಯಿಂದ ನೆಲಮಾಕನಹಳ್ಳಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಎದುರಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಟಿಪ್ಪರ್‌ನನೊಳಗೆ ನುಗ್ಗಿದ್ದು, ಬೈಕ್‌ನಲ್ಲಿದ್ದ ಇಬ್ಬರಿಗೂ ತೀವ್ರ ಗಾಯಗೊಂಡಿದ್ದಾರೆ, ಸ್ಥಳಲ್ಲಿಯೇ ಇದ್ದ ಸಾರ್ವಜನಿಕರು ಇಬ್ಬರನ್ನು ತಾಲ್ಲೂಕು ಆಸ್ಪತ್ರೆಗೆ ಕರೆತರುತ್ತಿದ್ದಾಗ ಯಶ್ವಂತ್ ಸಾವನ್ನಪ್ಪಿದ್ದಾರೆ, ಗಾಯಳು ವಸಂತ್‌ಗೆ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಈ ಸಂಬಂಧ ಪಟ್ಟಣದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!