ಪೊನ್ನಂಪೇಟೆಯಲ್ಲಿ ಭೀಕರ ಅಪಘಾತ: ಕಾರು ಚಾಲಕ ಸಾವು

ಹೊಸ ದಿಗಂತ ವರದಿ, ಮಡಿಕೇರಿ:

ಟಿಪ್ಪರ್ ಲಾರಿ ಹಾಗೂ ಮಾರುತಿ 800 ಕಾರು ನಡುವೆ ನಡೆದ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದಾರೆ.

ಬಾಳೆಲೆ ನಿವಾಸಿ ಅಡ್ಡೇಂಗಡ ಸಜನ್ ಎಂಬವರೇ ಸಾವಿಗೀಡಾದವರಾಗಿದ್ದಾರೆ.

ಬುಧವಾರ ಸಂಜೆ ಪೊನ್ನಂಪೇಟೆ ತಾಲೂಕಿನ ಬಾಳೆಲೆ ಸಮೀಪ ಕೈನಾಟಿಯಲ್ಲಿ ಈ ದುರ್ಘಟನೆ ನಡೆದಿದ್ದು, ಸಜನ್ ಚಾಲಿಸುತ್ತಿದ್ದ ಮಾರುತಿ ಕಾರಿಗೆ ಮರಳು ಸಾಗಾಟದ ಟಿಪ್ಪರ್ ಲಾರಿ ಅಪ್ಪಳಿಸಿದೆ.

ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಮರಳು ಲಾರಿಯ ಅತಿ ವೇಗದ ಚಾಲನೆ ಇದಕ್ಕೆ ಕಾರಣ ಎಂದು ಬಾಳೆಲೆ ವ್ಯಾಪ್ತಿಯ ಸಾರ್ವಜನಿಕರು ಆರೋಪಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!